ETV Bharat / state

ರಾಮನಗರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

author img

By

Published : Aug 4, 2021, 5:13 PM IST

Updated : Aug 4, 2021, 5:28 PM IST

Man died
ವ್ಯಕ್ತಿ ಸಾವು

ರಾಮನಗರ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಇಂದು ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪದ ಚಿಕ್ಕಪೇಟೆಹಳ್ಳಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದಾನೆ.

ರಾಮನಗರ: ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಆನೆ, ಚಿರತೆ ದಾಳಿಯಿಂದ ಜನರು ನಿದ್ದೆಗೆಟ್ಟಿದ್ದಾರೆ. ಇದೀಗ ಕಾಡಾನೆ ದಾಳಿಯಿಂದ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ರಾಮನಗರದಲ್ಲಿ ಕಾಡಾನೆ ದಾಳಿ

ರುದ್ರೇಗೌಡ (55) ಮೃತ ವ್ಯಕ್ತಿಯಾಗಿದ್ದು, ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪದ ಚಿಕ್ಕಪೇಟೆಹಳ್ಳಿ ಗ್ರಾಮದವರಾಗಿದ್ದಾರೆ. ಇಂದು ಮುಂಜಾನೆ ಜಮೀನಿಗೆ ಹೋಗಿದ್ದ ವೇಳೆ ಆನೆ ದಾಳಿಗೆ ಸಿಲುಕಿ, ಕಾಲು ಮುರಿದುಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ರುದ್ರೇಗೌಡ ಮೃತ ಪಟ್ಟಿದ್ದಾನೆಂದು ತಿಳಿದು ಬಂದಿದೆ.

ಓದಿ: ಬೊಮ್ಮಾಯಿ ಸಂಪುಟಕ್ಕೆ 29 ಮಂದಿ ದಂಡು.. ಸಿಕ್ಕವರ ಪ್ರಮಾಣ, ಸಿಗದವರಿಗಿಲ್ಲ ಸಮಾಧಾನ..

ಪದೇ ಪದೇ ಕಾಡಂಚಿನ ಗ್ರಾಮದಲ್ಲಿ ಆನೆಗಳ ಹಾವಳಿ ನಡೆಯುತ್ತಲೇ ಇದೆ. ಆದರೂ ಅರಣ್ಯಾಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ. ಹಾಗೆಯೇ ಘಟನೆ ಸಂಬಂಧ ಚಿಕ್ಕಪೇಟೆ ಗ್ರಾಮದಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Last Updated :Aug 4, 2021, 5:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.