ETV Bharat / state

ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್​ ಬರುತ್ತಿದ್ದಾಗ ರಸ್ತೆ ಅಪಘಾತ: ಇಬ್ಬರು ಸಾವು

author img

By

Published : Dec 24, 2022, 11:08 AM IST

Updated : Dec 24, 2022, 12:32 PM IST

ಕ್ಯಾಂಟರ್‌ಗೆ ಟಿಟಿ‌ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ರಾಮನಗರದ ಬೆಳೆಕೆರೆ ಗ್ರಾಮದ ಹೆದ್ದಾರಿ ಬಳಿ ನಡೆದಿದೆ.

road accident
ರಸ್ತೆ ಅಪಘಾತ

ರಾಮನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತ

ರಾಮನಗರ: ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಮಂಡ್ಯಕ್ಕೆ ವಾಪಸ್ ಆಗುತ್ತಿದ್ದ ಟಿಟಿ‌ ವಾಹನವೊಂದು ಕ್ಯಾಂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಬೆಳೆಕೆರೆ ಗ್ರಾಮದ ಹೆದ್ದಾರಿಯಲ್ಲಿ ನಡೆದಿದೆ.

ನಿದ್ದೆಯ ಮಂಪರಿನಲ್ಲಿ ಟೆಂಪೋ ಟ್ರಾವೆಲರ್ ವಾಹನ ಚಲಾಯಿಸಿಕೊಂಡು ಬಂದ ಡ್ರೈವರ್​ ಮುಂದೆ ಹೋಗುತ್ತಿದ್ದ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಉಳಿದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಟೆಂಪೋ ಟ್ರಾವೆಲರ್: ಚಾಲಕ ಸೇರಿ ಇಬ್ಬರ ದುರ್ಮರಣ

Last Updated :Dec 24, 2022, 12:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.