ETV Bharat / state

ಡಿವೈಡರ್​​​​ ಮೇಲಿಂದ ಹಾರಿ ಬೈಕ್​​ಗೆ ಕಾರು ಡಿಕ್ಕಿ: ಇಬ್ಬರ ದುರ್ಮರಣ

author img

By

Published : Jan 31, 2020, 10:40 AM IST

Updated : Jan 31, 2020, 11:25 AM IST

bike accident
ಬೈಕ್​ ಸವಾರರು ಬಲಿ

ಕಾರೊಂದು ಡಿವೈಡರ್ ಮೇಲೆ ಹಾರಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್​ ಸವಾರರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮನಗರ: ಕಾರೊಂದು ಡಿವೈಡರ್ ಮೇಲೆ ಹಾರಿ ಬಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್​ ಸವಾರರು ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ರಾಮನಗರದಲ್ಲಿ ರಸ್ತೆ ಅಪಘಾತ

ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸೀಬನಹಳ್ಳಿ ಗ್ರಾಮದ ರಾಹುಲ್ (18), ಅಭಿಷೇಕ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ಚನ್ನಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಮತ್ತೀಕೆರೆಯ ಶಿವಳ್ಳಿ ಹೋಟೆಲ್ ಬಳಿ ಬೆಳಗ್ಗೆ ಕಾರೊಂದು ಡಿವೈಡರ್ ದಾಟಿ ಬಂದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ಹೆಲ್ಮೆಟ್ ಕಡ್ಡಾಯದ ಬಗ್ಗೆ ಎಎಸ್​ಪಿ ಕ್ಲಾಸ್ :

ಘಟನಾ‌ ಸ್ಥಳಕ್ಕೆ‌ ಎಎಸ್​ಪಿ ರಾಮರಾಜ‌ನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಕ್​ ಸವಾರರು ಹೆಲ್ಮೆಟ್ ಧರಿಸದೆ ವಾಹನ‌ ಚಲಾಯಿಸಿದ್ದಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ ಎಂದಿದ್ದಾರೆ. ಇನ್ನು ಇದೇ ವೇಳೆ ಜಮಾಯಿಸಿದ್ದ ಸ್ಥಳೀಯರಿಗೆ ಹೆಲ್ಮೆಟ್ ಕಡ್ಡಾಯದ ಕುರಿತು ಅರಿವು ಮೂಡಿಸಿದರು. ನಿಮ್ಮ ರಕ್ಷಣೆಗಾಗಿ ಹೆಲ್ಮೆಟ್ ಧರಿಸಿ ಎಂದು ಮನವಿ ಮಾಡಿದರು. ಈ ಘಟನೆ ಸಂಚಾರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Last Updated :Jan 31, 2020, 11:25 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.