ETV Bharat / state

'ಔರಾದ್ಕರ್‌ ವರದಿ ಜಾರಿ ಮಾಡಿ': ಅರೆ ಪೊಲೀಸ್ ಸಮವಸ್ತ್ರ ಧರಿಸಿ ವಾಟಾಳ್‌ ಪ್ರತಿಭಟನೆ

author img

By

Published : Oct 4, 2019, 5:02 PM IST

ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ

ಔರಾದ್ಕರ್ ವರದಿ ಜಾರಿಯ ವಿಳಂಬ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್ ನೇತೃತ್ವದಲ್ಲಿ ಅರೆ ಪೊಲೀಸ್ ಸಮವಸ್ತ್ರ ಧರಿಸಿ ಪ್ರತಿಭಟನೆ ನಡೆಸಿದರು.

ರಾಮನಗರ : ಔರಾದ್ಕರ್ ವರದಿ ಜಾರಿಯ ವಿಳಂಬ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್ ಅರೆ ಪೊಲೀಸ್ ಸಮವಸ್ತ್ರ ಧರಿಸಿ ಪ್ರತಿಭಟನೆ ನಡೆಸಿದರು.

ಅರೆ ಪೊಲೀಸ್​ ವೇಷ ಧರಿಸಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್​

ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅರ್ಧ ಪೊಲೀಸ್ ಉಡುಪು ಧರಿಸಿ, ಮೆಣಸಿನಕಾಯಿ ಹಂಚಿ ವಾಟಾಳ್ ನಾಗರಾಜ್ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದಿನ ಸಮ್ಮಿಶ್ರ ಸರ್ಕಾರ ಔರಾದ್ಕರ್ ವರದಿ ಜಾರಿಗೆ ಸಮ್ಮತಿಸಿತ್ತು. ಆದರೆ ಬಿಜೆಪಿ ಸರ್ಕಾರ ವರದಿ ಜಾರಿಗೆ ವಿಳಂಬಿಸುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಪೊಲೀಸರಿಗೆ ನೀಡುತ್ತಿರುವ ಸಂಬಳ ಹಾಗೂ ಭತ್ಯೆಗಳು ತೀರ ಕಡಿಮೆಯಿದೆ. ಆದ್ದರಿಂದ ವರದಿ ಜಾರಿಯಾಗಬೇಕು ಎಂದು ವಾಟಾಳ್ ಸರ್ಕಾರವನ್ನು​ ಒತ್ತಾಯಿಸಿದರು.

ಇದೇ ವೇಳೆ ನೆರೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಪ್ರಧಾನಿ ಮೋದಿ, ಕೇರಳ ಮತ್ತು ಉತ್ತರ ಪ್ರದೇಶ ರಾಜ್ಯಗಳ ಏಜೆಂಟ್, ಕರ್ನಾಟಕದ ವಿರೋಧಿ ಎಂದು ಕಿಡಿಕಾರಿದರು.

ಕೇಂದ್ರ ಸಚಿವರ ಹರಾಜು ಹಾಕುವ ಪ್ರತಿಭಟನೆ ಎಚ್ಚರಿಕೆ :

ಕೇಂದ್ರದಿಂದ ಅನುದಾನ ತರುವಲ್ಲಿ ವಿಫಲರಾಗಿರುವ ರಾಜ್ಯದ ಕೇಂದ್ರ ಸಚಿವರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಮೈಸೂರಿನಲ್ಲಿ ಕೇಂದ್ರ ಸಚಿವರ ಹರಾಜು ಹಾಕುವ ಪ್ರತಿಭಟನೆ ನಡೆಸುವುದಾಗಿ ಇದೇ ವೇಳೆ ಎಚ್ಚರಿಕೆ ನೀಡಿದರು.

ವರದಿ ಜಾರಿಯಿಂದ ಪೊಲೀಸರ ಮೂಲ ವೇತನ ಪರಿಷ್ಕರಣೆಯಾಗಲಿದೆ.

Intro:Body:ರಾಮನಗರ : ಔರದ್ಕರ್ ವರದಿ ಜಾರಿಯ ವಿಳಂಬ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅರೆ ಪೋಲೀಸ್ ಸಮವಸ್ತ್ರ ಧರಿಸಿ ಪ್ರತಿಭಟನೆ ನಡೆಸಿದರು.
ರಾಮನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅರ್ದ ಪೋಲೀಸ್ ಉಡುಪು ಧರಸಿ, ಮೆಣಸಿನಕಾಯಿ ಹಂಚಿ ವಾಟಾಳ್ ನಾಗರಾಜ್ ವಿನೂತನವಾಗಿ ಪ್ರತಿಭಟನೆ ನಡೆಸಿದ್ರು. ಹಿಂದಿನ ಸಮ್ಮಿಶ್ರ ಸರ್ಕಾರ ಔರದ್ಕರ್ ವರದಿ ಜಾರಿಗೆ ಸಮ್ಮತಿಸಿತ್ತು ಅದರೆ ಬಿಜೆಪಿ ಸರ್ಕಾರ ಔರದ್ಕರ್ ವರದಿ ಜಾರಿಗೆ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದ ವಾಟಳ್ ನಾಗರಾಜ್ ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ಪೋಲೀಸರಿಗೆ ನೀಡುತ್ತಿರುವ ಸಂಬಳ ಹಾಗೂ ಭತ್ಯೆಗಳು ತೀರ ಕಡಿಮೆಯಿದೆ ಅದ್ದರಿಂದ ಔರದ್ಕರ್ ವರದಿ ಜಾರಿಯಾಗಬೇಕು ಎಂದು ಒತ್ತಾಯಿಸಿದ್ರು.
ಇದೇ ವೇಳೆ ನೆರೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಪ್ರಧಾನಮಂತ್ರಿ ಮೋದಿ ಕೇರಳ ಮತ್ತು ಉತ್ತರ ಪ್ರದೇಶ ರಾಜ್ಯಗಳ ಎಜೆಂಟ್, ಕರ್ನಾಟಕದ ವಿರೋದಿ ಎಂದು ಛೇಡಿಸಿದ ಅವರು ಮೋದಿ ಕರ್ನಾಟಕ ಪ್ರವೇಶಕ್ಕೆ ಬಿಡುವುದಿಲ್ಲ ಎಂದು ಎಚ್ಚರಿಸಿದ್ರು. ಕೇಂದ್ರದಿಂದ ಅನುದಾನ ತರುವಲ್ಲಿ ವಿಪಲವಾಗಿರುವ ರಾಜ್ಯದ ಕೇಂದ್ರ ಸಚಿವರು ತಕ್ಷಣವೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಇಲ್ಲವಾದಲ್ಲಿ ಮೈಸೂರಿನಲ್ಲಿ ಕೇಂದ್ರ ಸಚಿವರ ಹರಾಜು ಹಾಕುವ ಪ್ರತಿಭಟನೆ ನಡೆಸುವುದಾಗಿ ಇದೇ ವೇಳೆ ಎಚ್ಚರಿಕೆ ನೀಡಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.