ETV Bharat / state

ಶಿವಮೊಗ್ಗ: ಹಫ್ತಾ ನಿರಾಕರಿಸಿದ ಹಣ್ಣಿನ ವ್ಯಾಪಾರಿಗೆ ಚಾಕು ಇರಿತ

author img

By

Published : Dec 15, 2022, 8:26 PM IST

Updated : Dec 15, 2022, 8:38 PM IST

ಫಯಾಜ್
ಫಯಾಜ್

ಗಾಂಧಿ ಬಜಾರ್​ನಲ್ಲಿರುವ ಹಣ್ಣಿನ ವ್ಯಾಪಾರಿಯೊಬ್ಬರು ಹಫ್ತಾ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ಹಫ್ತಾ ನಿರಾಕರಿಸಿದ ಹಣ್ಣಿನ ವ್ಯಾಪಾರಿಗೆ ಚಾಕು ಇರಿತ

ಶಿವಮೊಗ್ಗ: ನಗರದಲ್ಲಿ ಇತ್ತೀಚೆಗೆ ಚೂರಿ ಇರಿತ ಪ್ರಕರಣಗಳು ಹೆಚ್ಚುತ್ತಿವೆ. ಗಾಂಧಿ ಬಜಾರ್​ನಲ್ಲಿರುವ ಹಣ್ಣಿನ ವ್ಯಾಪಾರಿಯೊಬ್ಬರಿಗೆ ಇಂದು ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಹಫ್ತಾ ನೀಡಲು ನಿರಾಕರಿಸಿದ್ದಕ್ಕೆ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಫಯಾಜ್ ಎಂಬ ವ್ಯಾಪಾರಿಯ ಪಕ್ಕೆಲುಬಿಗೆ ಗಾಯವಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರ್ಬಾಜ್, ಸುಹೇಲ್ ಎಂಬುವವರು ಚಾಕು ಇರಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಶಿವಮೊಗ್ಗ ಚಾಕು ಇರಿತ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

Last Updated :Dec 15, 2022, 8:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.