ETV Bharat / state

Electricity price hike: ವಿದ್ಯುತ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ: ಶಿವಮೊಗ್ಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಸೇರಿ ಕಾರ್ಯಕರ್ತರು ಪೊಲೀಸ್​ ವಶ

author img

By

Published : Jun 15, 2023, 1:37 PM IST

ವಿದ್ಯುತ್ ದರ ಏರಿಕೆ ವಿರೋಧಿಸಿ ಶಿವಮೊಗ್ಗದಲ್ಲಿ ಇಂದು ಬಿಜೆಪಿ ಕಾರ್ಯಕರ್ತರೊಂದಿಗೆ ಸಂಸದ ಬಿ ವೈ ರಾಘವೇಂದ್ರ ಪ್ರತಿಭಟನೆ ನಡೆಸಿದ್ದಾರೆ.

ವಿದ್ಯುತ್ ದರ ಏರಿಕೆ ವಿರುದೋಸಿ ಪ್ರತಿಭಟನೆ
ವಿದ್ಯುತ್ ದರ ಏರಿಕೆ ವಿರುದೋಸಿ ಪ್ರತಿಭಟನೆ

ಶಿವಮೊಗ್ಗ: ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಇಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಘಟಕವು ನಗರದ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ವೇಳೆ ಸಂಸದ ಬಿ ವೈ ರಾಘವೇಂದ್ರ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ರೈಲ್ವೆ ನಿಲ್ದಾಣದ ರಸ್ತೆಯ ಕೆಇಬಿ ವೃತ್ತದಲ್ಲಿ ಇರುವ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

ಉಚಿತ ಭಾಗ್ಯಗಳ ಹೆಸರಿನಲ್ಲಿ ವಿದ್ಯುತ್ ದರವನ್ನು ಏರಿಕೆ ಮಾಡಿ ಸಾಮಾನ್ಯ ಜನರ ಮೇಲೆ ಬರೆ ಹಾಕಲಾಗುತ್ತಿದೆ. ದರ ಏರಿಕೆ ಮಾಡಿರುವುದನ್ನು ಕಳೆದ ಎರಡು ತಿಂಗಳಿನಿಂದ ಸೇರಿಸಿ ಗ್ರಾಹಕರಿಗೆ ಹೊರೆಯನ್ನುಂಟು ಮಾಡಿದ್ದಾರೆ. ಇದು ರಾಜ್ಯ ಸರ್ಕಾರದ ಹಗಲು ದರೋಡೆ ನೀತಿಯಾಗಿದೆ. ಒಂದು ಕಡೆ ಉಚಿತ ಎಂದು ಹೇಳಿ ಜನರನ್ನು ಸುಲಿಗೆ ಮಾಡುತ್ತಿದೆ. ಇಂತಹ ಸರ್ಕಾರದ ವಿರುದ್ಧ ಜನ ದಂಗೆ ಏಳುತ್ತಾರೆ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಹರಿಹಾಯ್ದರು.

ನಂತರ ಮಾಜಿ ಶಾಸಕ ಅಶೋಕ್​ ನಾಯ್ಕ ಅವರು ತಮ್ಮ ಬೇಡಿಕೆಗಳನ್ನು ಅಧಿಕಾರಿಗಳಿಗೆ ತಿಳಿಸಲಾಗುತ್ತದೆ. ಕಚೇರಿ ಒಳ ಹೋಗಲು ಅವಕಾಶ ನೀಡಿ ಎಂದು ಪಟ್ಟು ಹಿಡಿದಾಗ ಪೊಲೀಸರು ಕೇವಲ ನಾಯಕರುಗಳು ಮಾತ್ರ ಒಳಗೆ ಹೋಗಿ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಭಟನಕಾರರು ಒಪ್ಪದೆ ಹೋದಾಗ ಪೊಲೀಸರು ಸಂಸದ ರಾಘವೇಂದ್ರ, ಮಾಜಿ ಶಾಸಕ ಅಶೋಕ ನಾಯ್ಕ ಸೇರಿದಂತೆ ಸುಮಾರು 50 ಜನರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಮೆಸ್ಕಾಂ ಕಚೇರಿ ಮೇಲೆ ಕಲ್ಲು ತೂರಾಟ, 60ಕ್ಕೂ ಹೆಚ್ಚು ಜನರ ಬಂಧನ

ವಿದ್ಯುತ್ ದರ ಏರಿಕೆ ಖಂಡಿಸಿ ನೇಕಾರರ ಪ್ರತಿಭಟನೆ.. ವಿದ್ಯುತ್​ ದರ ಏರಿಕೆ ಖಂಡಿಸಿ ನಿನ್ನೆ ದಿನ ಬೆಳಗಾವಿ ನೇಕಾರರು ವಿದ್ಯುತ್ ದರ ಇಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಎಪ್ರಿಲ್​ನಿಂದ ಅನ್ವಯವಾಗುವಂತೆ ಪ್ರತಿ ಯೂನಿಟ್​ಗೆ ವಿದ್ಯುತ್ ದರ ಹೆಚ್ಚಿಸಿದ್ದು ಜನರಿಗೆ ಹೊರೆಯಾಗಿ ಪರಿಣಮಿಸಿದೆ ಎಂದು ಉತ್ತರಕರ್ನಾಟಕ ವೃತ್ತಿಪರ ನೇಕಾರ ಹೋರಾಟ ಸಮಿತಿ ನೇತೃತ್ವದಲ್ಲಿ ನಗರದ ಖಾಸಬಾಗ ಬಸವೇಶ್ವರ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಮೆರವಣಿಗೆಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು.

ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ ನೇಕಾರರು, ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರವೇ ರೂಪಿಸಿದ 1:25 ದರದ ಸಬ್ಸಿಡಿ ಯೋಜನೆಯಡಿ ನೇಕಾರಿಕೆ ಉದ್ಯೋಗಕ್ಕೆ ಮಿನಿಮಮ್ ಚಾರ್ಜ್ ಹಾಗೂ ಎಫ್ಎಸಿ ಶುಲ್ಕ ರದ್ದುಗೊಳಿಸಬೇಕು. ಗೃಹಬಳಕೆ ವಿದ್ಯುತ್ ದರ ಕಡಿಮೆ ಮಾಡಬೇಕು. ಅಲ್ಲದೇ ಬೇಡಿಕೆ ಈಡೇರುವವರೆಗೂ, ಯಾರೂ ವಿದ್ಯುತ್ ಬಿಲ್ ಕಟ್ಟಲ್ಲ ಎಂದು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ‌ ನೇಕಾರರ ಪ್ರತಿಭಟನೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.