ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು

author img

By

Published : Sep 29, 2022, 8:15 PM IST

congress-leader-raju-thallur-joins-bjp

ಸೊರಬದ ಕಾಂಗ್ರೆಸ್​ ಮುಖಂಡ ರಾಜು ತಲ್ಲೂರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್​ ತೊರೆದಯ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಾಜಿ ಸಚಿವ ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಸ್ವಾಗತಿಸಿದರು.

ಶಿವಮೊಗ್ಗ: ಸೊರಬದ ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಇಂದು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ರಾಜು ತಲ್ಲೂರು ಅವರಿಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪಕ್ಷದ ಶಾಲು ಹಾಕುವ ಮೂಲಕ ಪಕ್ಷಕ್ಕೆ ಸ್ವಾಗತ ಕೋರಿದರು.

ಈ ವೇಳೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ರಾಜುರವರು ಮಹತ್ವಕಾಂಕ್ಷೆಯ ವ್ಯಕ್ತಿಯಾಗಿದ್ದು, ಅವರು ಕೇವಲ ಸೊರಬಕ್ಕೆ ಸೀಮಿತವಾಗದೇ, ರಾಜ್ಯದಲ್ಲಿ ಹಿಂದುಳಿದ ವರ್ಗದ ರಾಜ್ಯ ನಾಯಕರಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಪಕ್ಷಕ್ಕೆ ದುಡಿದರೆ, ಮುಂದೆ ಪಕ್ಷ ನಿಮಗೆ ಉತ್ತಮ ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದ ರಾಜು ತಲ್ಲೂರು

ಬಳಿಕ ಮಾತನಾಡಿದ ರಾಜು ತಲ್ಲೂರು, ನಮ್ಮ ಮಡಿವಾಳ ಸಮಾಜದಿಂದ ಇದುವರೆಗೂ ಯಾರು ಕೂಡ ಶಾಸಕರಾಗಿಲ್ಲ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಇದೆ. ನಾನು ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಇಟ್ಟುಕೊಂಡು ಬಿಜೆಪಿಗೆ ಬಂದಿದ್ಧೇನೆ ಎಂದು ಹೇಳಿದರು. ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.

ರಾಜುರವರು ಸೊರಬ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದು, ಕಾಂಗ್ರೆಸ್ ನಲ್ಲಿ ಟಿಕೆಟ್​ ಸಿಗಬಹುದೆಂಬ ಬಯಕೆಯನ್ನು ಹೊಂದಿದ್ದರು. ಆದರೆ ಕಾಂಗ್ರೆಸ್​​​​​​​​​​ಗೆ ಮಧು ಬಂಗಾರಪ್ಪ ಸೇರ್ಪಡೆಯಾದ ನಂತರ ಟಿಕೆಟ್​ ಸಿಗುವುದಿಲ್ಲ ಎಂಬುದು ಖಚಿತವಾದ ಮೇಲೆ ರಾಜು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಪಿಎಫ್​ಐ ಬ್ಯಾನ್ ವಿರೋಧಿಸಿದರೆ ಜನರೇ ಒದೆಯುತ್ತಾರೆ: ಪ್ರಹ್ಲಾದ್ ಜೋಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.