'ಕೆಲವು ಮುಸ್ಲಿಂ ಗೂಂಡಾಗಳು ಶಿವಮೊಗ್ಗವನ್ನು ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ'

author img

By

Published : Jun 22, 2022, 3:26 PM IST

former-minister-eshwarappa-says-muslim-goons-doing-shivmogga-as-goond-state

ನಿನ್ನೆ ಇರಿತಕ್ಕೊಳಗಾದ ಪೊಲೀಸ್ ಪೇದೆಯನ್ನು ಭೇಟಿ ಮಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಗ್ಯ ವಿಚಾರಿಸಿದರು.

ಶಿವಮೊಗ್ಗ: ಕೆಲ ಮುಸ್ಲಿಂ ಗೂಂಡಾಗಳು ಶಿವಮೊಗ್ಗವನ್ನು ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ ಎಂದು ಮಾಜಿ ಸಚಿವ ಕೆ.‌ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ನಿನ್ನೆ ಚಾಕುವಿನಿಂದ ಇರಿತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೊಡ್ಡಪೇಟೆ ಪೊಲೀಸ್ ಕಾನ್ಸ್‌ಟೇಬಲ್ ಆರೋಗ್ಯ ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಜನಸಾಮಾನ್ಯರ ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಕೆಲ ಮುಸ್ಲಿಂ ಗೂಂಡಾಗಳು ಚಾಕು ಹಾಕಿದ್ದಾರೆ. ಚಾಕು ಹಾಕಿ ತಪ್ಪಿಸಿಕೊಂಡು ಹೋಗುವ ಪ್ರಯತ್ನ ಮಾಡಿರುವುದು ಇಲಾಖೆಗೂ ಅಪಮಾನ. ಇಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಧೈರ್ಯವಾಗಿ ನಡೆಯುತ್ತಿದೆ ಎನ್ನುವುದಕ್ಕೆ ನನಗೂ ಶಾಸಕನಾಗಿ ನಾಚಿಕೆ ಆಗುತ್ತಿದೆ ಎಂದರು.


ಕೆಲವು ಗೂಂಡಾಗಳು ಯಾವುದೇ ಭಯವಿಲ್ಲದೇ ಗೂಂಡಾಗಿರಿ ಮಾಡುತ್ತಿದ್ದಾರೆ. ಶಿವಮೊಗ್ಗವನ್ನು ಗೂಂಡಾ ರಾಜ್ಯ ಮಾಡಲು ಹೊರಟಿದ್ದಾರೆ. ಇದರ ಬಗ್ಗೆ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿಗಳ ಜೊತೆಯಲ್ಲಿ ನಾನು ಕೂಡ ಈ ಕುರಿತು ಮಾತನಾಡುತ್ತೇನೆ. ಗಾಯಾಳು ಪೊಲೀಸ್ ಕಾನ್ಸ್‌ಟೇಬಲ್ ಆರೋಗ್ಯವಾಗಿದ್ದಾರೆ. ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ಈಶ್ವರಪ್ಪ ಮಾಹಿತಿ ನೀಡಿದರು.

ಇದನ್ನೂ ಓದಿ: 'ಐಕಿಯಾ' ಫರ್ನಿಚರ್ ಮಳಿಗೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.