ಶಿವಮೊಗ್ಗ ಹರ್ಷ ಕೊಲೆ ಪ್ರಕರಣ: 10 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

author img

By

Published : Mar 7, 2022, 7:51 PM IST

judicial-custody-for-harsha-murder-case-accused

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ 10 ಜನ ಆರೋಪಿಗಳಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಫೆಬ್ರವರಿ‌ 20ರಂದು ಕೊಲೆ ನಡೆದಿದ್ದು, ಕೃತ್ಯ ನಡೆದ 48 ಗಂಟೆಯಲ್ಲಿ ಈ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.‌

ಬಳಿಕ ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡಬೇಕೆಂದು ಫೆಬ್ರವರಿ 25ರಂದು ನ್ಯಾಯಾಲಯಕ್ಕೆ ಪೊಲೀಸರು ವಿನಂತಿಸಿದ್ದರು. ಅದರಂತೆ ಶಿವಮೊಗ್ಗದ ಎರಡನೇ ಜೆಎಂಎಫ್​ಸಿ ನ್ಯಾಯಾಲಯವು ಫೆಬ್ರವರಿ 25ರಿಂದ ಮಾರ್ಚ್ 7ರ ತನಕ ಒಟ್ಟು 11 ದಿನ ಪೊಲೀಸರ ವಶಕ್ಕೆ ನೀಡಿ ಆದೇಶಿಸಿತ್ತು. ಇಂದು ಪೊಲೀಸ್ ಕಸ್ಟಡಿ ಮುಗಿದ ಕಾರಣ ಆರೋಪಿಗಳನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.‌

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಕ್ಷನ್​​ 302ರಂತೆ ಪ್ರಕರಣ ದಾಖಲಿಸಿಕೊಂಡು ಪೊಲೀಸ್‌ ತನಿಖೆ ನಡೆಸಲಾಗಿದೆ. ಮಾರ್ಚ್ 2ರ ಸಂಜೆ 10 ಜನ ಆರೋಪಿಗಳ ವಿರುದ್ದ ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಕಾಯ್ದೆಯಂತೆ ಡಿವೈಎಸ್​​ಪಿ ಹಾಗೂ ಅವರಿಗಿಂತ ಮೇಲ್ಪಟ್ಟ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಬೇಕಿದೆ. ಬಂಧಿತ ಯಾವ ಆರೋಪಿಯೂ ಕೂಡ ಇನ್ನೂ ಜಾಮೀನಿಗೆ ಅರ್ಜಿ ಹಾಕಿಲ್ಲ.

ಇದನ್ನೂ ಓದಿ: ಮೈಸೂರು ರೈಲ್ವೆ ಕ್ವಾರ್ಟರ್ಸ್​​​ನಲ್ಲಿ ಕ್ಲೋರಿನೇಷನ್ ಸೋರಿಕೆ: 5ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.