ETV Bharat / state

ಜನ ಸಂಕಲ್ಪ ಯಾತ್ರೆಗೆ ಸಕಲ ಸಿದ್ಧತೆ: ಶಾಸಕ ಕುಮಾರ್ ಬಂಗಾರಪ್ಪ

author img

By

Published : Nov 14, 2022, 11:55 AM IST

ಜನ ಸಂಕಲ್ಪ ಯಾತ್ರೆ ಸೊರಬ ತಾಲೂಕಿನ ಆನವಟ್ಟಿ ಪಟ್ಟಣಕ್ಕೆ ನ.15ರಂದು ಆಗಮಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಳ್ಳುತ್ತಿದ್ದಾರೆ. ಜೊತೆಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಹೊಂದಲಾಗಿದೆ ಎಂದು ಶಾಸಕ ಎಸ್ ಕುಮಾರ್ ಬಂಗಾರಪ್ಪ ಹೇಳಿದರು.

kumar bangarappa
ಶಾಸಕ ಕುಮಾರ್ ಬಂಗಾರಪ್ಪ

ಶಿವಮೊಗ್ಗ : ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ-ಮನಗಳಿಗೆ ತಲುಪಿಸುವ ಜೊತೆಗೆ ಪಕ್ಷದ ಸಂಘಟನಾ ದೃಷ್ಟಿಯಿಂದ ಹಮ್ಮಿಕೊಂಡಿರುವ ಜನ ಸಂಕಲ್ಪ ಯಾತ್ರೆ ಸೊರಬ ತಾಲೂಕಿನ ಆನವಟ್ಟಿ ಪಟ್ಟಣಕ್ಕೆ ನ.15ರಂದು ಆಗಮಿಸಲಿದೆ ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.

ತಾಲೂಕಿನ ಆನವಟ್ಟಿ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್‌ ಆವರಣದಲ್ಲಿ ಜನ ಸಂಕಲ್ಪ ಯಾತ್ರೆಯ ಪೂರ್ವ ಸಿದ್ಧತೆ ಕುರಿತು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಜನ ಸಂಕಲ್ಪ ಯಾತ್ರೆಯನ್ನು ಮೂರು ತಂಡಗಳಾಗಿ ರಚಿಸಲಾಗಿದ್ದು, ಜಿಲ್ಲೆಯಲ್ಲಿ ಆನವಟ್ಟಿಯನ್ನು ಕೇಂದ್ರವಾಗಿರಿಸಿಕೊಂಡು ಯಾತ್ರೆ ನಡೆಸಲಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಳ್ಳುತ್ತಿದ್ದಾರೆ. ಜಿಲ್ಲೆಯ ಎಲ್ಲ ಕ್ಷೇತ್ರಗಳ ಜನ ಪ್ರತಿನಿಧಿಗಳು, ಸಚಿವರು, ಪಕ್ಷದ ಪದಾಧಿಕಾರಿಗಳು, ತಾಲೂಕಿನ 239 ಬೂತ್‌ಗಳ ಅಧ್ಯಕ್ಷರು, ಪಕ್ಷದ ಕಾರ್ಯಕರ್ತರು ಸುಮಾರು 30 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಹೊಂದಲಾಗಿದೆ ಎಂದರು.

ಶಾಸಕ ಕುಮಾರ್ ಬಂಗಾರಪ್ಪ ಮಾಧ್ಯಮಗೋಷ್ಟಿ

ಮುಂದಿನ ಚುನಾವಣೆಗೆ ಸಂಬಂಧಿಸಿದಂತೆ ಕ್ಷೇತ್ರಕ್ಕೆ ವಿಶೇಷ ಪ್ರಣಾಳಿಕೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾಲ್ಕೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಕುರಿತ ಸಾಧನಾ ಕೈಪಿಡಿಯನ್ನು ಬಿ.ಎಸ್. ಯಡಿಯೂರಪ್ಪ ಬಿಡುಗಡೆಗೊಳಿಸಲಿದ್ದಾರೆ. ತಾಲೂಕಿನ ಅಭಿವೃದ್ಧಿಗೆ ಸಂಬಂಧಿಸದಂತೆ ರಸ್ತೆ, ಶಿಕ್ಷಣ, ಆರೋಗ್ಯ, ನೀರಾವರಿ, ಮೂಲಭೂತ ಸೌಲಭ್ಯಗಳ ಕುರಿತು ಮತ್ತು ಶಿರಾಳಕೊಪ್ಪ-ಸೊರಬ ರಸ್ತೆಯನ್ನು ಚತುಷ್ಪಥ ಮಾಡುವುದು, ತಾಳಗುಪ್ಪದಿಂದ ಸೊರಬ-ಆನವಟ್ಟಿ ಮಾರ್ಗವಾಗಿ ಹುಬ್ಬಳ್ಳಿ ರೈಲ್ವೆ ಸಂಪರ್ಕ ಕಲ್ಪಿಸುವ ಕುರಿತು ಮನವಿ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಯಡಿಯೂರಪ್ಪ ನಮಗೆ ರಾಜಕೀಯ ಮರುಜನ್ಮ ನೀಡಿದವರು: ಕುಮಾರ್​ ಬಂಗಾರಪ್ಪ

ಸಭಾ ಕಾರ್ಯಕ್ರಮವು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾದಗಂತೆ ಸಂಜೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಫಲಾಹಾರದ ವ್ಯವಸ್ಥೆ ಮಾಡಲಾಗಿದೆ. ವೇದಿಕೆಯಲ್ಲಿ ಅನಾವಶ್ಯಕ ಸನ್ಮಾನ, ಹಾರ-ತುರಾಯಿಗಳಿಗೆ ಅವಕಾಶವಿರುವುದಿಲ್ಲ. ಇದನ್ನು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗಮನದಲ್ಲಿಟ್ಟುಕೊಳ್ಳಬೇಕು. ಜೊತೆಗೆ ಸಭಾ ಕಾರ್ಯಕ್ರಮದ ನಂತರ ಹಸಿರು ಕೊಠಡಿಯನ್ನು ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದೆ. ಕ್ಷೇತ್ರದ ಹಲವು ಮಠಾಧೀಶರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ, ಮಠಗಳ ಅಭಿವೃದ್ಧಿ ಸೇರಿದಂತೆ ವಿವಿಧ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತ್ತೊಂದೆಡೆ, ಕಲಾವಿದರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಿದ್ಧತೆ ನಡೆಸಲಾಗಿದೆ ಎಂದರು.

ಇದನ್ನೂ ಓದಿ: ವಿಡಿಯೋ: 'ಅಶ್ವಮೇಧ' ಚಿತ್ರದ ಹಾಡು ಹೇಳಿ ಸ್ಟೇಜ್​ ಮೇಲೆ ಧೂಳ್​ ಎಬ್ಬಿಸಿದ ಶಾಸಕ ಎಸ್. ಕುಮಾರ್ ಬಂಗಾರಪ್ಪ

ಈ ವೇಳೆ ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಕಡಸೂರು, ಮಲ್ಲಿಕಾರ್ಜುನ ವೃತ್ತಿಕೊಪ್ಪ, ಪ್ರಮುಖರಾದ ಟಿ.ಆರ್. ಸುರೇಶ್, ಮಹೇಶ್ ಮೂಡಿ, ಶಬ್ಬೀರ್ ಅಹಮ್ಮದ್ ಖಿಲ್ಲೇದಾರ್, ಅಮಿತ್ ಗೌಡ, ಕಿರಣ್ ಕುಮಾರ್, ರಾಜು ಕೆಂಚಿಕೊಪ್ಪ, ಚನ್ನಬಸಪ್ಪ, ಶಿವನಗೌಡ ಸೇರಿದಂತೆ ಮತ್ತಿತರರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.