ETV Bharat / state

ಚಕ್ರವರ್ತಿ ಸೂಲಿಬೆಲೆಗೆ ಸ್ವಲ್ಪ ಜಾಸ್ತಿಯೇ ತಲೆ ಹರಟೆ ಇದೆ: ಮಧು ಬಂಗಾರಪ್ಪ

author img

By ETV Bharat Karnataka Team

Published : Aug 31, 2023, 9:03 AM IST

Updated : Aug 31, 2023, 2:13 PM IST

ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸ್ವಲ್ಪ ಜಾಸ್ತಿಯೇ ತಲೆ ಹರಟೆ ಇದೆ, ಇವರನ್ನು ಸಹ ಮೋದಿ ಒಂದು ದಿನ ಬ್ಯಾರಿಕೇಡ್ ಹಿಂದೆ ನಿಲ್ಲಿಸುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಾಗ್ದಾಳಿ ನಡೆಸಿದರು.

madhu bangarappa
ಮಧು ಬಂಗಾರಪ್ಪ

ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ನಮ್ಮ ಪಕ್ಷದ ಕಾರ್ಯಕರ್ತೆಗೆ ಅವಹೇಳನಕಾರಿ ಕಮೆಂಟ್​ ಮಾಡಿರುವ ಚಕ್ರವರ್ತಿ ಸೂಲಿಬೆಲೆಗೆ ಸ್ವಲ್ಪ ಜಾಸ್ತಿಯೇ ತಲೆ ಹರಟೆ ಇದೆ, ಸುಳ್ಳು ಹೇಳಿಕೊಂಡು ಭಾಷಣ ಮಾಡುವ ಇವರನ್ನು ಸಹ ಒಂದು ದಿನ ಪಿಎಂ ಮೋದಿ ಬ್ಯಾರಿಕೇಡ್ ಹಿಂದೆ ನಿಲ್ಲಿಸುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಿನ್ನೆ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, " ಹೆಣ್ಣು ಮಕ್ಕಳಿಗೆ ಗೌರವ ಕೊಡದ ಈತನ ಯೋಗ್ಯತೆ ಏನೆಂದು ತಿಳಿಯುತ್ತದೆ. ನಮ್ಮದು ಒಳ್ಳೆಯ ಸರ್ಕಾರ, ಈ ಚಕ್ರವರ್ತಿ ಸೂಲಿಬೆಲೆ ಬಾಯಲ್ಲೂ ಸಹ ಒಳ್ಳೆಯ ಮಾತುಗಳು ಬರುವ ಹಾಗೆ ನಾವು ಮಾಡುತ್ತೇವೆ. ಇವನ ಯೋಗ್ಯತೆ ಬರೆ ಸುಳ್ಳು ಹೇಳುವುದಾಗಿದೆ, ನಾವು ಎಲ್ಲರೂ ಹೆಣ್ಣು ಮಗಳಿಗೆ ಬೆಂಬಲವಾಗಿ ನಿಂತುಕೊಳ್ಳಬೇಕು" ಎಂದರು.

ರಾಕಿ ಕಟ್ಟಿಸಿಕೊಂಡ ಸಚಿವ ಮಧು ಬಂಗಾರಪ್ಪ : ಇನ್ನು ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಚಿವ ಮಧು ಬಂಗಾರಪ್ಪನವರಿಗೆ ರಾಕಿ ಕಟ್ಟಿ ರಕ್ಷಾಬಂಧನ ಹಬ್ಬದ ಶುಭಾಶಯಗಳನ್ನು ಕೋರಿದರು.

ಏನಿದು ಅವಹೇಳನಕಾರಿ ಕಾಮೆಂಟ್​ ಆರೋಪ : ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ದೂರು ನೀಡಿದ್ದಾರೆ. ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶಿವಮೊಗ್ಗ : ಕಾಂಗ್ರೆಸ್​ ಕಾರ್ಯಕರ್ತೆಯ ಅವಹೇಳನ ಆರೋಪ ; ಸೂಲಿಬೆಲೆ ವಿರುದ್ಧ ಎಫ್​ಐಆರ್​

ಇದೇ ತಿಂಗಳ 23 ರಂದು ಇಸ್ರೋದ ಚಂದ್ರಯಾನ 3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಸೂಲಿಬೆಲೆ ಹಾಕಿದ್ದ ಪೋಸ್ಟ್​ಗೆ ಸೌಗಂಧಿಕ ರಘುನಾಥ್ ತಮ್ಮ ಅಧಿಕೃತ ಖಾತೆಯಿಂದ ಕಾಮೆಂಟ್ ಮಾಡಿ, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ, ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಅಂತಾ ಕಾಮೆಂಟ್ ಮಾಡಿದ್ದರು. ಈ ಕಾಮೆಂಟ್​ಗೆ ಸೂಲಿಬೆಲೆಯವರು ಅವಹೇಳನಕಾರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ.

ಇದನ್ನೂ ಓದಿ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ಸಿಡಿದೆದ್ದ ಕಾಂಗ್ರೆಸ್​.. ಕೈ ವಿರುದ್ಧವೂ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

"ದೇಶ, ಭಾಷೆ, ಧರ್ಮದ ಹೆಸರಲ್ಲಿ ಭಾಷಣ ಮಾಡುವ ವ್ಯಕ್ತಿ ಈಗ ಹೆಣ್ಣುಮಕ್ಕಳ ನಿಂದನೆಗೆ ಇಳಿದಿದ್ದಾರೆ. ಯಾವ ಹೆಣ್ಣಿಗೂ ಕೂಡ ಇಂತಹ ಮಾತುಗಳನ್ನು ಆಡಬಾರದು, ಅವರ ಮನೆಯಲ್ಲಿರುವ ತಾಯಿ ಕೂಡ ಹೆಣ್ಣು ಎನ್ನುವುದನ್ನು ಮರೆಯಬಾರದು. ಹಾಗಾಗಿ, ಅಂತವರಿಗೆ ಶಿಕ್ಷೆ ಆಗಬೇಕು" ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸುತ್ತೇವೆ.. ಕೆಪಿಸಿಸಿ ಮಾಧ್ಯಮ ವಕ್ತಾರ ಎಂ ಲಕ್ಷ್ಮಣ್

Last Updated : Aug 31, 2023, 2:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.