ETV Bharat / state

ಮಂಗಳೂರು ಬಾಂಬ್ ಪತ್ತೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಎಸ್​ಡಿಪಿಐ ಆಗ್ರಹ

author img

By

Published : Jan 23, 2020, 3:45 PM IST

ಮಂಗಳೂರು ಬಾಂಬ್ ಹಿಂದಿನ ಷಡ್ಯಂತ್ರವನ್ನು ಬಯಲು ಮಾಡಬೇಕು ಹಾಗೂ ಗೃಹ ಸಚಿವ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಎಸ್​ಡಿಪಿಐ ಸಂಘಟನೆಯ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ್ರು.

mangalore bomb case investigation
ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಶಿವಮೊಗ್ಗ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್ ಹಿಂದಿನ ಷಡ್ಯಂತ್ರವನ್ನು ಬಯಲು ಮಾಡಬೇಕು ಹಾಗೂ ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಎಸ್​ಡಿಪಿಐ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದ್ರು.

ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂದಿರುವ ಗೃಹ ಸಚಿವರ ಹೇಳಿಕೆಯ ಹಿಂದೆ ಪೂರ್ವ ನಿಯೋಜಿತ ತಂತ್ರ ಅಡಗಿದೆ. ಹಾಗಾಗಿ, ಈ ಪ್ರಕರಣದ ಹಿಂದಿರುವ ಸೂತ್ರದಾರರನ್ನು ಪತ್ತೆ ಹಚ್ಚಬೇಕು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

Intro:ಶಿವಮೊಗ್ಗ,
ಮಂಗಳೂರು ಬಾಂಬ್ ಷಡ್ಯಂತ್ರವನ್ನು ಬಯಲಿಗೆಲೇಯಬೇಕು ಹಾಗೂ ರಾಜ್ಯ ಸರ್ಕಾರದ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಎಸ್ ಡಿ ಪಿಐ ಸಂಘಟನೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಬಾಂಬ್ ಇಟ್ಟಿರುವ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥತನೆಂದು ಹೇಳಿಕೆ ನೀಡಿರುವ ಗೃಹ ಸಚಿವರ ಹೇಳಿಕೆಯ ಹಿಂದೆ ಪೂರ್ವಯೋಜಿತ ತಂತ್ರ ಅಡಗಿದೆ.ಹಾಗಾಗಿ ಈ ಪ್ರಕರಣದ ಹಿಂದೆ ಇರುವ ಸೂತ್ರದಾರನ್ನು ಪತ್ತೆ ಹಚ್ಚಬೇಕು ಹಾಗೂ ಸೂಕ್ತ ರೀತಿಯಲ್ಲಿ ಈ ಪ್ರಕರಣ ವನ್ನು ತನಿಖೆ ನಡೆಸಬೇಕು . ಬೇಜವಾಬ್ದಾರಿಯುತ ಹೇಳಿಕೆಯನ್ನು ನೀಡಿ ಪ್ರಕರಣದ ದಿಕ್ಕು ತಪ್ಪಿಸಲು ಯತ್ನಿಸಿರುವ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಿದರು.

ಭೀಮಾನಾಯ್ಕ ಎಸ್ ಶಿವಮೊಗ್ಗ



Body:ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.