ETV Bharat / state

ಶಿವಮೊಗ್ಗ: ಚಲಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ನಿಂದ ಜಿಗಿದು ಯುವಕ ಸಾವು

author img

By

Published : Nov 18, 2022, 7:56 AM IST

Mentally ill died after jumping from KSRTC bus
ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಜಿಗಿದು ಅಸ್ವಸ್ಥ ಸಾವು

ಚಲಿಸುತ್ತಿರುವ ಕೆ.ಎಸ್.ಆರ್.ಟಿ.ಸಿ ಬಸ್‌ನಿಂದ ಜಿಗಿದು ಮಾನಸಿಕ ಅಸ್ವಸ್ಥ ಯುವಕ ಸಾವನ್ನಪ್ಪಿದ್ದಾರೆ.

ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್‌ನಿಂದ ಜಿಗಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಭದ್ರಾವತಿಯ ವೀರಪುರ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರನ್ನು ನಂದೀಶ್ (35) ಎಂದು ಗುರುತಿಸಲಾಗಿದೆ. ಇವರು ಮಾನಸಿಕ ಅಸ್ವಸ್ಥರು ಎಂಬ ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಮಿಳ್ಳೆನಹಳ್ಳಿಯ ನಿವಾಸಿಯಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ವಾಪಸ್ ಹೋಗುವಾಗ ಘಟನೆ ಸಂಭವಿಸಿದೆ. ಹಲವು ವರ್ಷಗಳಿಂದ ಮನೋರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಾಲಾ ವಾಹನದ ಚಕ್ರಕ್ಕೆ ಸಿಲುಕಿ 3 ವರ್ಷದ ಬಾಲಕಿ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.