ETV Bharat / state

ರಾಷ್ಟ್ರಮಟ್ಟದ ಖೋಖೋ ಆಟಗಾರ ಹಿನ್ನೀರಲ್ಲಿ ಮುಳುಗಿ ಸಾವು: ಕೊಲೆ ಶಂಕೆ

author img

By

Published : Jun 1, 2020, 4:06 PM IST

ಶಿವಮೊಗ್ಗ ಮೂಲದ ರಾಷ್ಟ್ರಮಟ್ಟದ ಖೋಖೋ ಆಟಗಾರ ಅರುಣ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

national-kho-kho-player-died
ರಾಷ್ಟ್ರಮಟ್ಟದ ಖೋಖೋ ಆಟಗಾರ ಸಾವು

ಶಿವಮೊಗ್ಗ: ರಾಷ್ಟ್ರಮಟ್ಟದ ಖೋಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಮಂಡಗದ್ದೆಯಲ್ಲಿ ನಡೆದಿದೆ.

national-kho-kho-player-died
ರಾಷ್ಟ್ರಮಟ್ಟದ ಖೋಖೋ ಆಟಗಾರ ಸಾವು

ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ನಿವಾಸಿಯಾದ ಅರುಣ್(27) ಸಾವನ್ನಪ್ಪಿದ ಖೋಖೋ ಆಟಗಾರ. ಇವರು ಶಿವಮೊಗ್ಗದ ಕೆಎಸ್ಆರ್​​ಟಿಸಿ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ರು. ಶನಿವಾರ ತನ್ನ ಸ್ನೇಹಿತರ ಜೊತೆ ತೆರಳಿದ್ದ ಅರುಣ್ ಕಾಣೆಯಾಗಿದ್ದಾರೆ ಎಂದು ಪೋಷಕರು, ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇಂದು ತೀರ್ಥಹಳ್ಳಿ ತಾಲೂಕು ಮಂಡಗದ್ದೆಯ ತುಂಗಾ ನದಿಯ ಹಿನ್ನೀರಿನಲ್ಲಿ ಅರುಣ್ ಶವ ಪತ್ತೆಯಾಗಿದೆ.

ಇತ್ತ ತಮ್ಮ ಮಗ ಅರುಣ್​​ನನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿರುವ ಮಾಳೂರು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.