ಶಿವಮೊಗ್ಗ: ಮಲೆನಾಡಿನಲ್ಲಿ ದಿನೇ ದಿನೇ ನೆಟ್ವರ್ಕ್ ಸಮಸ್ಯೆ ಉಲ್ಬಣವಾಗುತ್ತಲೇ ಇದೆ. ಇಡೀ ದೇಶದಲ್ಲಿ ಡಿಜಿಟಲ್ ಇಂಡಿಯಾದಡಿ ಎಲ್ಲವನ್ನೂ ಡಿಜಿಟಲೈಸೇಷನ್ ಮಾಡಲಾಗುತ್ತಿದೆ. ಆದರೆ ಮಲೆನಾಡಿನಲ್ಲಿ 2ಜಿ ನೆಟ್ವರ್ಕ್ ಸಹ ಸರಿಯಾಗಿ ಸಿಗುತ್ತಿಲ್ಲ.
ಲಾಕ್ಡೌನ್ ಕಾರಣದಿಂದ ಸಾವಿರಾರು ಉದ್ಯೋಗಿಗಳು ಮಲೆನಾಡಿನ ತಮ್ಮ ಕುಗ್ರಾಮಗಳಿಗೆ ಆಗಮಿಸಿದ್ದರು. ಆದರೆ ನೆಟ್ವರ್ಕ್ ಸಮಸ್ಯೆಯಿಂದಾಗಿ ಮನೆಯ ಸಮೀಪದಲ್ಲಿ ಎಲ್ಲಿ ನೆಟ್ವರ್ಕ್ ಸಿಗುತ್ತದೆಯೋ ಅಲ್ಲಿ ಟೆಂಟ್ ನಿರ್ಮಿಸಿಕೊಂಡು ಕೆಲಸ ಮಾಡುತ್ತಿದ್ದರು. ಹೀಗೆ ನಿರ್ಮಿಸಿಕೊಂಡಿರುವ ಟೆಂಟ್ಗಳಲ್ಲಿ ವಿದ್ಯಾರ್ಥಿಗಳೂ ಆನ್ಲೈನ್ ಶಿಕ್ಷಣ ಪಡೆಯುತ್ತಿದ್ದರು. ಆದರೆ ಇದೀಗ ಮಳೆಗಾಲ ಆರಂಭಗೊಂಡಿದ್ದು, ಟೆಂಟ್ಗಳಲ್ಲಿಯೂ ನೆಟ್ವರ್ಕ್ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಧೋ ಎಂದು ಸುರಿಯುವ ಮಳೆಯಲ್ಲಿ ಗುಡ್ಡದ ಮೇಲೆ ಛತ್ರಿ ಹಿಡಿದು ನಿಲ್ಲಬೇಕಾದ ಸ್ಥಿತಿ ಐಟಿ ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳದ್ದಾಗಿದೆ.
ಸಾಗರ ಹಾಗೂ ಹೊಸನಗರ ತಾಲೂಕಿನ ಕುಗ್ರಾಮಗಳಲ್ಲಿ ನೆಟ್ವರ್ಕ್ ಸಮಸ್ಯೆ ಹೇಳತೀರದಾಗಿದೆ. ನೆಟ್ವರ್ಕ್ ಸಿಗಲಿ ಎಂಬ ಕಾರಣಕ್ಕೆ ಸಾವಿರಾರು ರೂಪಾಯಿ ಖರ್ಚು ಮಾಡಿ ಬೂಸ್ಟರ್ಗಳನ್ನು ಅಳವಡಿಸಿಕೊಂಡರೂ ನೆಟ್ವರ್ಕ್ ಮಾತ್ರ ಸಿಗುತ್ತಿಲ್ಲ. ಹೀಗಾಗಿ ಬೆಟ್ಟದ ಮೇಲೆ ಕುರ್ಚಿ ಹಾಕಿಕೊಂಡು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು, ಇನ್ನೊಂದು ಕೈಯಲ್ಲಿ ಲ್ಯಾಪ್ಟ್ಯಾಪ್ ಹಿಡಿದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.
ಓದಿ:ತಾರಕಕ್ಕೇರಿದ ಶಾಲಾ ಫೀಸ್ ಫೈಟ್: 10ನೇ ತರಗತಿ ಪರೀಕ್ಷೆಗೆ Delta+ ವೈರಸ್ Tension