ETV Bharat / state

ನಾಳೆಯಿಂದ ಅನಾವಶ್ಯಕವಾಗಿ ಹೊರಗೆ ಬಂದರೆ ಕಠಿಣ ಕ್ರಮ: ಶಿವಮೊಗ್ಗ ಎಸ್​ಪಿ ಎಚ್ಚರಿಕೆ

author img

By

Published : May 9, 2021, 8:23 PM IST

ನಾಳೆಯಿಂದ ಯಾರೂ ಕೂಡ ಮನೆಯಿಂದ ಅನಾವಶ್ಯಕವಾಗಿ ಹೊರಬರಬೇಡಿ ಎಂದು ಶಿವಮೊಗ್ಗ ಎಸ್​ಪಿ ಲಕ್ಷ್ಮಿ ಪ್ರಸಾದ್ ಸಾರ್ವಜನಿಕರಿಗೆ ಮನವಿ ಮಾಡಿಕೊಂಡಿದ್ದಾರೆ.

Shimoga S P Warning
ಶಿವಮೊಗ್ಗ ಎಸ್​ಪಿ ಎಚ್ಚರಿಕೆ

ಶಿವಮೊಗ್ಗ: ನಾಳೆಯಿಂದ ಲಾಕ್​ಡೌನ್ ಜಾರಿಯಾಗಲಿದ್ದು, ಸರ್ಕಾರದ ನಿಯಮ ಮೀರಿ ಅನಗತ್ಯವಾಗಿ ಓಡಾಡಿದರೆ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಎಚ್ಚರಿಸಿದ್ದಾರೆ.

ಶಿವಮೊಗ್ಗ ಎಸ್​ಪಿ ಎಚ್ಚರಿಕೆ

ನಗರದಲ್ಲಿ ಮಾತನಾಡಿದ ಅವರು, ಮನೆ ಹತ್ತಿರವಿರುವ ಶಾಪ್​ಗಳಿಗೆ ನಡೆದುಕೊಂಡು ಹೋಗಿ ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ತರಬಹುದು. ಇದನ್ನು ಹೊರತುಪಡಿಸಿ ಅನಗತ್ಯವಾಗಿ ವಾಹನಗಳಲ್ಲಿ ಓಡಾಡಿದರೆ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತದೆ. ಜಿಲ್ಲಾಡಳಿತ ನೀಡಿರುವ ಪಾಸ್​ಗಳನ್ನು ಹೊರತುಪಡಿಸಿ ಉಳಿದ ಪಾಸ್​ಗಳಿಗೆ ಅವಕಾಶ ನೀಡುವುದಿಲ್ಲ. ಶಿವಮೊಗ್ಗ ಸಿಟಿಯಲ್ಲಿ 31 ಚೆಕ್​ಪೋಸ್ಟ್ ಹಾಗೂ ಜಿಲ್ಲೆಯ ಗಡಿಭಾಗ ಸೇರಿದಂತೆ ಜಿಲ್ಲೆಯಲ್ಲಿ 76 ಚೆಕ್​ಪೋಸ್ಟ್​ಗಳನ್ನು ನಿರ್ಮಿಸಲಾಗಿದೆ.

ನಾಳೆಯಿಂದ ಪ್ರತಿಯೊಂದು ವಾಹನವನ್ನು ತಪಾಸಣೆ ಮಾಡಿ ತುರ್ತು ಕೆಲಸಗಳಿಗೆ ಮಾತ್ರ ಅವಕಾಶ ಕೊಡಲಾಗುವುದು. ಈಗಾಗಲೇ ಸರ್ಕಾರದ ನಿಯಮ ಮೀರಿ ವ್ಯಾಪಾರ ಮಾಡುತ್ತಿದ್ದ ಒಟ್ಟು 146 ಅ‌ಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.