ETV Bharat / state

3 ಸಾವಿರ ಮನೆಗಳ ನಿರ್ಮಾಣಕ್ಕೆ ತಕ್ಷಣ ಟೆಂಡರ್: ಸಚಿವ ಕೆ.ಎಸ್.ಈಶ್ವರಪ್ಪ

author img

By

Published : Oct 5, 2019, 8:59 PM IST

ಆಶ್ರಯ ಯೋಜನೆಯಡಿ ಗೋವಿಂದಪುರ ಗ್ರಾಮದಲ್ಲಿ 3 ಸಾವಿರ ಮನೆಗಳ ನಿರ್ಮಾಣಕ್ಕೆ ತಕ್ಷಣ ಟೆಂಡರ್ ಕರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಆಶ್ರಯ ಯೋಜನೆಯಡಿ ಗೋವಿಂದಪುರ ಗ್ರಾಮದಲ್ಲಿ 3 ಸಾವಿರ ಮನೆಗಳ ನಿರ್ಮಾಣಕ್ಕೆ ತಕ್ಷಣ ಟೆಂಡರ್ ಕರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರ ಆಶ್ರಯ ಸಮಿತಿ ಸಭೆಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಗೋವಿಂದಪುರದಲ್ಲಿ 3 ಸಾವಿರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ 1,836 ಮನೆಗಳ ನಿರ್ಮಾಣಕ್ಕೆ ಪ್ರತಿ ಮನೆಯ ವೆಚ್ಚ 5.85 ಲಕ್ಷ ರೂ.ಗಳಿಗೆ ತಾಂತ್ರಿಕ ಅನುಮೋದನೆ ದೊರೆತಿದೆ. ಸದರಿ ಯೋಜನೆಗಳಿಗೆ ಫಲಾನುಭವಿಗಳ ವಂತಿಗೆಯಿಂದ ಅಂದಾಜು 16 ಕೋಟಿ ರೂ. ಹಾಗೂ ಕೇಂದ್ರ ಸರ್ಕಾರದಿಂದ 29 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ ಗೋವಿಂದಪುರದ 3 ಸಾವಿರ ಮನೆಗಳಿಗೆ ತಕ್ಷಣ ಟೆಂಡರ್ ಕರೆದು ಲಭ್ಯವಿರುವ ಅನುದಾನದಲ್ಲಿ ಕೆಲಸ ಪ್ರಾರಂಭಿಸುವಂತೆ ಸಚಿವರು ತಿಳಿಸಿದರು.

ರಸ್ತೆ ಮತ್ತಿತರ ಮೂಲಸೌಲಭ್ಯ ಕಲ್ಪಿಸಲು ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ ಜಿ ಪ್ಲಸ್ ಟು ಮಾದರಿಯ ಮನೆಗಳನ್ನು ವಿತರಿಸಲು, ಪ್ರಥಮ ಹಂತದಲ್ಲಿ 4,725 ನಿವೇಶನ ರಹಿತದಾರರನ್ನು ಗುರುತಿಸಲಾಗಿದೆ. ಈ ಪೈಕಿ 2,250 ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಹಣ ಪಾವತಿಸಿದ್ದಾರೆ. ಎರಡನೇ ಹಂತದಲ್ಲಿ 1,370 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪಟ್ಟಿಯನ್ನು ಆದಷ್ಟು ಬೇಗನೆ ಅಂತಿಮಗೊಳಿಸಬೇಕು. ಗೋವಿಂದಪುರದಲ್ಲಿ ಒಂದು ಮಾದರಿ ಮನೆಯನ್ನು ನಿರ್ಮಿಸಲು ಈಗಾಗಲೇ ಸೂಚಿಸಲಾಗಿದೆ. ಆದಷ್ಟು ಬೇಗನೆ ಮಾದರಿ ಮನೆ ನಿರ್ಮಾಣ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸಚಿವ ಕೆ.ಎಸ್​.ಈಶ್ವರಪ್ಪ ಸೂಚನೆ ನೀಡಿದರು.

ವಿರುಪಿನಕೊಪ್ಪ ಗ್ರಾಮದಲ್ಲಿ ಅಡಿಕೆ ಮಂಡಿ ಹಮಾಲರಿಗಾಗಿ ನಿರ್ಮಿಸಿರುವ ಪ್ರದೇಶದಲ್ಲಿ ಉದ್ಯಾನಕ್ಕಾಗಿ ಮೀಸಲಾಗಿರಿಸಿರುವ ಸ್ಥಳದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ 10 ಮನೆಗಳನ್ನು ತಕ್ಷಣ ತೆರವುಗೊಳಿಸುವಂತೆ ಸಚಿವರು ಆದೇಶಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಉಪವಿಭಾಗಾಧಿಕಾರಿ ಪ್ರಕಾಶ್ ಮತ್ತಿತರ ಅಧಿಕಾರಿಗಳು ಹಾಗೂ ಆಶ್ರಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Intro:ಶಿವಮೊಗ್ಗ,

3ಸಾವಿರ ಮನೆಗಳ ನಿರ್ಮಾಣಕ್ಕೆ ತಕ್ಷಣ ಟೆಂಡರ್: ಸಚಿವ ಕೆ.ಎಸ್.ಈಶ್ವರಪ್ಪ

ನಗರ ಆಶ್ರಯ ಯೋಜನೆಯಡಿ ಗೋವಿಂದಪುರ ಗ್ರಾಮದಲ್ಲಿ 3ಸಾವಿರ ಮನೆಗಳ ನಿರ್ಮಾಣಕ್ಕೆ ತಕ್ಷಣ ಟೆಂಡರ್ ಕರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರ ಆಶ್ರಯ ಸಮಿತಿ ಸಭೆಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಗೋವಿಂದಪುರದಲ್ಲಿ 3ಸಾವಿರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ 1836ಮನೆಗಳ ನಿರ್ಮಾಣಕ್ಕೆ ಪ್ರತಿ ಮನೆಯ ಘಟಕ ವೆಚ್ಚ ರೂ. 5.85ಲಕ್ಷಗಳಿಗೆ ತಾಂತ್ರಿಕ ಅನುಮೋದನೆ ದೊರೆತಿದೆ. ಸದರಿ ಯೋಜನೆಗಳಿಗೆ ಫಲಾನುಭವಿಗಳ ವಂತಿಗೆಯಿಂದ ಅಂದಾಜು 16ಕೋಟಿ ರೂ. ಹಾಗೂ ಕೇಂದ್ರ ಸರ್ಕಾರದಿಂದ 29ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ ಗೋವಿಂದಪುರದ 3ಸಾವಿರ ಮನೆಗಳಿಗೆ ಟೆಂಡರ್ ತಕ್ಷಣ ಕರೆದು ಲಭ್ಯವಿರುವ ಅನುದಾನದಲ್ಲಿ ಕೆಲಸ ಪ್ರಾರಂಭಿಸುವಂತೆ ಸಚಿವರು ತಿಳಿಸಿದರು.

ರಸ್ತೆ ಮತ್ತಿತರ ಮೂಲಸೌಲಭ್ಯ ಕಲ್ಪಿಸಲು ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪದಲ್ಲಿ ಜಿ ಪ್ಲಸ್ ಟು ಮಾದರಿಯ ಮನೆಗಳನ್ನು ವಿತರಿಸಲು ಪ್ರಥಮ ಹಂತದಲ್ಲಿ 4725 ನಿವೇಶನರಹಿತದಾರರನ್ನು ಗುರುತಿಸಲಾಗಿದೆ. ಈ ಪೈಕಿ 2250 ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಹಣ ಪಾವತಿಸಿದ್ದಾರೆ. ಎರಡನೇ ಹಂತದಲ್ಲಿ 1370 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪಟ್ಟಿಯನ್ನು ಆದಷ್ಟು ಬೇಗನೆ ಅಂತಿಮಗೊಳಿಸಬೇಕು. ಗೋವಿಂದಪುರದಲ್ಲಿ ಒಂದು ಮಾದರಿ ಮನೆಯನ್ನು ನಿರ್ಮಿಸಲು ಈಗಾಗಲೇ ಸೂಚಿಸಿದ್ದು, ಆದಷ್ಟು ಬೇಗನೆ ಮಾದರಿ ಮನೆ ನಿರ್ಮಾಣ ಪೂರ್ಣಗೊಳಿಸುವಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ವಿರುಪಿನಕೊಪ್ಪ ಗ್ರಾಮದಲ್ಲಿ ಅಡಿಕೆ ಮಂಡಿ ಹಮಾಲರಿಗಾಗಿ ನಿರ್ಮಿಸಿರುವ ಪ್ರದೇಶದಲ್ಲಿ ಉದ್ಯಾನಕ್ಕಾಗಿ ಮೀಸಲಾಗಿರಿಸಿರುವ ಸ್ಥಳದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ 10ಮನೆಗಳನ್ನು ತಕ್ಷಣ ತೆರವುಗೊಳಿಸುವಂತೆ ಸಚಿವರು ಆದೇಶಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಉಪವಿಭಾಗಾಧಿಕಾರಿ ಪ್ರಕಾಶ್ ಮತ್ತಿತರ ಅಧಿಕಾರಿಗಳು ಹಾಗೂ ಆಶ್ರಯ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.