ಕಡಜ ಹುಳುಗಳ ದಾಳಿಗೆ ಭದ್ರಾವತಿಯಲ್ಲಿ ಇಬ್ಬರು ಬಲಿ

author img

By

Published : Oct 3, 2021, 3:17 PM IST

Shimoga

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ಕಡಜ ಹುಳಗಳ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ತೋಟದಲ್ಲಿ ಅಡಿಕೆ ಗೊನೆ ಕೀಳುವಾಗ ಕಡಜ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಜಮೀನು ಮಾಲೀಕ ನಂಜಪ್ಪ(50) ಹಾಗೂ ಕಾರ್ಮಿಕ ಸಿದ್ಲಿಪುರದ ಮಲ್ಲಿಕಾರ್ಜುನ್(52) ಮೃತರು.

ಭದ್ರಾವತಿಯ ಕಾಗದ ನಗರದ ಆನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೋಟದಲ್ಲಿ ಅಡಿಕೆ ಗೊನೆ ತೆಗೆಯುವಾಗ ಆಕಸ್ಮಿಕವಾಗಿ ಗೊನೆ ಕೋಲು ಕಡಜದ ಗೂಡಿಗೆ ತಗುಲಿ ಕಡಜ ಹುಳುಗಳು ಮಲ್ಲಿಕಾರ್ಜುನ್ ಹಾಗೂ ನಂಜಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದ್ದವು. ತಕ್ಷಣ ಇಬ್ಬರನ್ನು ಭದ್ರಾವತಿಯ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆ ಹೊತ್ತಿಗಾಗಲೇ ಇಬ್ಬರು ಸಾವನ್ನಪ್ಪಿದ್ದರು ಎಂದು ತಿಳಿದುಬಂದಿದೆ.

ಈ ಕುರಿತಂತೆ ಕಾಗದ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಂಕೇಶ್ವರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಅಜ್ಜಿ-ಮೊಮ್ಮಗ ದುರ್ಮರಣ: ಸೊಸೆ ಸ್ಥಿತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.