ಸಾಗರದ ಲಾಡ್ಜ್​​​​ನಲ್ಲಿ ಬಾಗಲಕೋಟೆ ಮೂಲದ ಯುವಕರಿಬ್ಬರು ನೇಣಿಗೆ ಶರಣು

author img

By

Published : Sep 26, 2021, 9:03 PM IST

ಯುವಕರಿಬ್ಬರು ನೇಣಿಗೆ ಶರಣು

ಸಾಗರ ಪಟ್ಟಣದ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ನಲ್ಲಿ ಬಾಗಲಕೋಟೆ ಜಿಲ್ಲೆಯ ಇಬ್ಬರು ಯುವಕರು ನೇಣು ಬಿಗಿದುಕೊಂಡು‌ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಮೊಗ್ಗ: ಬಾಗಲಕೋಟೆ ಜಿಲ್ಲೆಯ ಇಬ್ಬರು ಯುವಕರು ಸಾಗರ ಪಟ್ಟಣದ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್​​ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಮೃತ ದುರ್ದೈವಿಗಳು. ಸಂತೋಷ್ ಮತ್ತು ಹನುಮಂತ ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ 8-30ಕ್ಕೆ ರೂಮ್‌ ಬಾಯ್ ಊಟ ಬೇಕೆಂದು ಕೇಳಲು ಬಾಗಿಲು ಬಡಿದಾಗಲೂ ಇಬ್ಬರೂ ಹೊರಗೆ ಬಂದಿರಲಿಲ್ಲ. ರೂಮ್‌ ಬಾಯ್ ಇಬ್ಬರೂ ಮಲಗಿರಬೇಕು ಎಂದು ವಾಪಸ್ ಹೋಗಿದ್ದ. ಇಂದು ಬೆಳಗ್ಗೆ ರೂಮ್​ನ ಬಾಗಿಲು ಸಾಕಷ್ಟು ಬಾರಿ ಬಡಿದಾಗಲೂ ಬಾಗಿಲು ತೆರೆಯಲಿಲ್ಲ. ಇದರಿಂದ ಅನುಮಾನಗೊಂಡು ಪೊಲೀಸರಿಗೆ ತಿಳಿಸಿದ್ದಾರೆ.

ಪೊಲೀಸರ ಸಮ್ಮುಖದಲ್ಲಿ ರೂಮ್​ನ ಬಾಗಿಲು ಒಡೆದು ನೋಡಿದಾಗ ಇಬ್ಬರೂ ರೂಮ್​ನಲ್ಲಿರುವ ಎರಡು ಫ್ಯಾನ್‌ಗೆ ನೇಣು ಹಾಕಿಕೊಂಡಿರುವುದು ಪತ್ತೆಯಾಗಿದೆ. ಸ್ಥಳಕ್ಕೆ ಸಾಗರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.