ETV Bharat / state

VISL ಕಾರ್ಖಾನೆಯನ್ನು ಉಳಿಸಲು ಪ್ರಯತ್ನ ಮಾಡುತ್ತಲೇ ಇದ್ದೇವೆ .. ಸಂಸದ ಬಿ ವೈ ರಾಘವೇಂದ್ರ

author img

By

Published : Jun 23, 2019, 11:53 AM IST

ಬಿವೈ ರಾಘವೇಂದ್ರ

ಭದ್ರಾವತಿಯ VISL ಕಾರ್ಖಾನೆಯು ವಾರ್ಷಿಕ 100 ಕೋಟಿ ರೂ.ಗಳ ನಷ್ಟ ಅನುಭವಿಸುತ್ತಿದೆ. ನಷ್ಟದಲ್ಲಿರುವ ದೇಶದ ಸುಮಾರು 100 ಸಾರ್ವಜನಿಕ ವಲಯದ ಕಾರ್ಖಾನೆಗಳಲ್ಲಿ ಇದೂ ಕೂಡ ಒಂದಾಗಿದೆ. ಇದನ್ನು ನೀತಿ ಆಯೋಗ ಬಂಡವಾಳ ಹಿಂತೆಗೆತ ಪಟ್ಟಿಯಲ್ಲಿ ದಾಖಲಿಸಿದೆ. ಆದರೂ VISL ಉಳಿಸಲು ಪ್ರಯತ್ನ ಮಾಡುತ್ತಲೇ ಇದ್ದೇವೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.

ಶಿವಮೊಗ್ಗ: ದೇಶದಲ್ಲಿ ನಷ್ಟದಲ್ಲಿರುವ ಕಾರ್ಖಾನೆಗಳ ಪೈಕಿ VISL ಕಾರ್ಖಾನೆಯೂ ಒಂದಾಗಿದೆ. ಇದನ್ನು ಉಳಿಸಲು ಶ್ರಮಿಸುತ್ತಿದ್ದೇವೆ ಎಂದು ಸಂಸದ ಬಿ ವೈ ರಾಘವೇಂದ್ರ ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2009ರಿಂದ 2019ರವರೆಗೆ ನಿರಂತರವಾಗಿ ವಾರ್ಷಿಕ 100 ಕೋಟಿ ರೂ. ನಷ್ಟ ಅನುಭವಿಸುತ್ತ ಬಂದಿರುವ VISL ಕಾರ್ಖಾನೆಗೆ ಮತ್ತೆ ಬಂಡವಾಳ ಹೂಡುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಲಾಗಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ ಎಂದರು.

ಕೃಷಿ ಸಮ್ಮಾನ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಿ

ಬಳಿಕ ಕೇಂದ್ರದ ಕೃಷಿ ಸಮ್ಮಾನ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ರೈತರಲ್ಲಿ ವಿನಂತಿಸಿದರು. ಪ್ರತಿ ತಾಲೂಕಿಗೂ 30 ಕೋಟಿ ಹಣ ದೊರೆಯುತ್ತದೆ. ಈಗಾಗಲೇ ಮೊದಲ ಕಂತಾಗಿ ಕೇಂದ್ರ ಸರ್ಕಾರ 12 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದೆ. ಈ ಯೋಜನೆಗೆ ರೈತರು ಅರ್ಜಿಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

Intro:ಶಿವಮೊಗ್ಗ,
ಭದ್ರಾವತಿಯ VISL ಕಾರ್ಖಾನೆಯು ವಾರ್ಷಿಕ 100 ಕೋಟಿ ರೂಗಳ ನಷ್ಟ ಅನುಭವಿಸುತ್ತಿದ್ದು. ದೇಶದ ಸುಮಾರು 100 ಸಾರ್ವಜನಿಕ ವಲಯದ ನಷ್ಟದಲ್ಲಿರುವ ಕಾರ್ಖಾನೆಗಳ ಪೈಕಿ ಇದು ಒಂದಾಗಿದೆ. ಇದನ್ನು ನೀತಿ ಆಯೋಗ ಬಂಡವಾಳ ಹಿಂತೆಗೆತ ಪಟ್ಟಿಯಲ್ಲಿ ದಾಖಲಿಸಿದೆ ಆದರೂ ಅದನ್ನು ಉಳಿಸಲು ಪ್ರಯತ್ನ ಮಾಡುತ್ತಲೇ ಇದ್ದೇವೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದರು.


Body:ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2009ರಿಂದ 2019ರವರೆಗೆ ನಿರಂತರವಾಗಿ ವಾರ್ಷಿಕ 100 ಕೋಟಿ ರು ನಷ್ಟ ಅನುಭವಿಸುತ್ತ ಬಂದಿರುವ. ಈ ಕಾರ್ಖಾನೆ ಗೆ ಮತ್ತೆ ಬಂಡವಾಳ ಹೂಡುವಂತೆ ಕೇಂದ್ರ ಸರ್ಕಾರವನ್ನು ವಿನಂತಿಸಲಾಗಿದೆ. ಈ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ ಎಂದರು.
ನಂತರದಲ್ಲಿ ಮಾತನಾಡಿದವರು ಕೇಂದ್ರದ ಕೃಷಿ ಸಮ್ಮಾನ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ರೈತರಲ್ಲಿ ವಿನಂತಿಸಿದರು.
ಕೇಂದ್ರ ಸರ್ಕಾರ ಕೃಷಿ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಪ್ರತಿ ತಾಲೂಕಿಗೂ 30 ಕೋಟಿ ಹಣ ದೊರೆಯುತ್ತದೆ. ಈಗಾಗಲೇ ಮೊದಲ ಕಂತಾಗಿ ಕೇಂದ್ರ ಸರ್ಕಾರ 12 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದೆ. ಈ ಯೋಜನೆಗೆ ರೈತರು ಅರ್ಜಿಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದ್ದು. ರೈತರು ಈ ಯೋಜನೆಯ ಸದುಪಯೋಗಪಡುಕೊಳ್ಳಬೇಕು ಎಂದು ತಿಳಿಸಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.