ETV Bharat / state

ಶಿವಮೊಗ್ಗದಲ್ಲಿ ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ‌‌ ಕೊಲೆ: ಪ್ರಮುಖ ಆರೋಪಿ ಬಂಧನ

author img

By

Published : Jun 15, 2023, 6:59 AM IST

Updated : Jun 15, 2023, 2:23 PM IST

ಯುವಕನೊಬ್ಬನನ್ನು ನಾಲ್ವರು ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ‌ ಹತ್ಯೆ‌ ಮಾಡಿರುವ ಘಟನೆ ಶಿವಮೊಗ್ಗದಲ್ಲಿ‌ ನಡೆದಿದೆ.

youth murdered in shivamogga
ಶಿವಮೊಗ್ಗದಲ್ಲಿ ಯುವಕನ‌‌ ಕೊಲೆ

ಘಟನೆ ಕುರಿತು ಮಾಹಿತಿ ನೀಡಿದ ಎಸ್​ಪಿ ಮಿಥುನ್ ಕುಮಾರ್

ಶಿವಮೊಗ್ಗ : ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಯುವಕರ ಗುಂಪೊಂದು ಮಾರಾಕಾಸ್ತ್ರಗಳಿಂದ‌ ಕೊಚ್ಚಿ ಬರ್ಬರವಾಗಿ‌ ಕೊಲೆ‌ ಮಾಡಿರುವ ಘಟನೆ ಶಿವಮೊಗ್ಗದಲ್ಲಿ‌ ನಡೆದಿದೆ. ಇಲ್ಲಿನ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಆಸೀಫ್(25) ಮೃತ ವ್ಯಕ್ತಿ. ಈತನನ್ನು ಜಬಿವುಲ್ಲಾ (25) ಹಾಗೂ ಇತರ ಮೂವರು ಯುವಕರು ಸೇರಿ ಕೊಲೆ ಮಾಡಿದ್ದಾರೆ.

ಮೃತ ಆಸಿಫ್, ಇಲಿಯಾಜ್‌ ನಗರದ 100 ಅಡಿ ರಸ್ತೆಯಲ್ಲಿ ಬೈಕ್​ನಲ್ಲಿ ಬಂದು ನಿಂತಿದ್ದ. ಈ ವೇಳೆ ಹಿಂಬದಿಯಿಂದ ಬಂದ ನಾಲ್ವರು ಯುವಕರ ಗುಂಪು, ಮಾರಾಕಾಸ್ತ್ರಗಳಿಂದ ದಾಳಿ ಮಾಡಿದೆ. ದಾಳಿ ವೇಳೆ ಆಸೀಫ್ ತಲೆಗೆ ಬಲವಾದ ಹೊಡೆತ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆ ಕಂಡು ಸ್ಥಳೀಯರು ಗಾಬರಿಯಿಂದ ಓಡಾಡಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸರು ಭೇಟಿ‌ ನೀಡಿ ಪರಿಶೀಲಿಸಿದ್ದಾರೆ. ಮೃತ ಆಸೀಫ್ ಹಾಗೂ ಜಬೀವುಲ್ಲಾ ಇಬ್ಬರು ಆಟೋ ಚಾಲಕರೆಂದು ತಿಳಿದು ಬಂದಿದೆ.

ಬುಧವಾರ ರಾತ್ರಿ ನಡೆದ ಯುವಕನ ಭೀಕರ ಕೊಲೆಯ ಪ್ರಮುಖ ಆರೋಪಿ ಜಬೀವುಲ್ಲಾನನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಇಂದು ಡಿಎಆರ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ರಾತ್ರಿ ಇಲಿಯಾಜ್ ನಗರದ 100 ಅಡಿ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಆಸೀಫ್ ಎಂಬಾತನನ್ನು ಹಿಂಬದಿಯಿಂದ ಬಂದ ಜಬೀವುಲ್ಲಾ ಹಾಗೂ ಇತರೆ ಮೂವರು ಸೇರಿ ಮಾರಾಕಾಸ್ತ್ರಗಳಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದರು. ಪ್ರಮುಖ ಆರೋಪಿ ಜಬೀವುಲ್ಲಾನನ್ನು ಬಂಧಿಸಲಾಗಿದೆ. ಕೊಲೆಗೆ ಹಳೆಯ ದ್ವೇಷ ಎಂಬುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಆಸೀಫ್ ಹಾಗೂ ಜಬೀವುಲ್ಲಾ ಈ ಇಬ್ಬರ ನಡುವೆ ಕಳೆದ ಕೆಲ ತಿಂಗಳಿನಿಂದ ದ್ವೇಷ ನಡೆಯುತ್ತಿತ್ತು. ಈ ಕುರಿತು ಸಮುದಾಯದ ಮುಖಂಡರುಗಳು ಮಾತುಕತೆ ನಡೆಸಿದ್ದರು. ಆದರೂ ಸಹ ಬಗೆಹರಿದಿರಲಿಲ್ಲ. ಸದ್ಯಕ್ಕೆ ಓರ್ವನನ್ನು ಮಾತ್ರ ಬಂಧಿಸಲಾಗಿದೆ. ಇತರೆ ಮೂವರನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದರು.

ಹೆತ್ತ ತಾಯಿ ಕೊಂದ ಮಗಳು : ಮಹಿಳೆಯೊಬ್ಬರು ಹೆತ್ತ ತಾಯಿಯನ್ನು ಕೊಂದು ಸೂಟ್ ಕೇಸ್​ನಲ್ಲಿ ಶವ ತುಂಬಿಕೊಂಡು ಸೋಮವಾರ (ಜೂನ್​ 12 ರಂದು) ರಾತ್ರಿ 11:30ಕ್ಕೆ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ ಘಟನೆ ನಡೆದಿತ್ತು. ಸೆನಾಲಿ ಸೇನ್ (39)ಎಂಬಾಕೆ ತಮ್ಮ 71 ವರ್ಷದ ತಾಯಿ ಬೀವಾ ಪಾಲ್​ ಕೊಲೆ ಮಾಡಿ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಳು. ಒಂದೇ ಮನೆಯಲ್ಲಿದ್ದ ಸೆನಾಲಿಯ ತಾಯಿ ಹಾಗೂ ಅತ್ತೆ ನಡುವೆ ಪ್ರತಿನಿತ್ಯ ಜಗಳವಾಗುತ್ತಿತ್ತಂತೆ. ಇದರಿಂದ ಬೇಸತ್ತಾ ಆರೋಪಿ ಮಹಿಳೆ ಸ್ವತಃ ತಾನೇ ತಾಯಿಗೆ ನಿದ್ರೆ ಮಾತ್ರೆಗಳನ್ನು ನುಂಗಿಸಿದ್ದಾಳೆ. ಬಳಿಕ ತಾಯಿ ಹೊಟ್ಟೆ ನೋವು ಎಂದಾಗ ವೇಲ್​ನಿಂದ ಆಕೆಯ ಕುತ್ತಿಗೆ ಬಿಗಿದು ಸಾಯಿಸಿದ್ದಾಳೆ.

ಇದನ್ನೂ ಓದಿ : ಹೆತ್ತ ತಾಯಿ ಕೊಂದು ಸೂಟ್​ ಕೇಸ್​ನಲ್ಲಿ ಶವ ತಂದು ಪೊಲೀಸರಿಗೆ ಶರಣಾದ ಮಗಳು

ಇನ್ನು ಬಿಹಾರದ ಖಗಾಡಿಯಾದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಬುಧವಾರ (ಜೂನ್​ 14 ರಂದು) ಮುಂಜಾನೆ ವ್ಯಕ್ತಿಯೊಬ್ಬ ಕುಟುಂಬದ ಸದಸ್ಯರೆಲ್ಲರನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾನ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಎಕಾನಿಯಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರನ್ನು ಆರೋಪಿ ತಂದೆ ಮುನ್ನಾ ಯಾದವ್ (40 ), ಪತ್ನಿ ಪೂಜಾ ದೇವಿ (32) ಮತ್ತು ಹೆಣ್ಣು ಮಕ್ಕಳಾದ- ಸುಮನ್ ಕುಮಾರಿ (18 ), ಆಂಚಲ್ ಕುಮಾರಿ (16), ರೋಶನಿ ಕುಮಾರಿ (15 ) ಎಂದು ಗುರುತಿಸಲಾಗಿದೆ.

Bengaluru lady murder.. ಒಂಟಿ ಮಹಿಳೆ ಬರ್ಬರ ಕೊಲೆ.. ಶವ ಸಾಗಿಸಲು ಕೈ ಕಾಲು ಕತ್ತರಿಸಿದ್ರು: ಬನ್ನೇರುಘಟ್ಟ ಪೊಲೀಸರಿಂದ ಬಿಹಾರ ಮೂಲದ ಆರೋಪಿ ಅರೆಸ್ಟ್​

Last Updated : Jun 15, 2023, 2:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.