ETV Bharat / state

ಮಳೆಯಿಂದ ತತ್ತರಿಸಿದ ರೈತರ ಖಾತೆಗೆ 36.5 ಕೋಟಿ ರೂ. ಸಬ್ಸಿಡಿ ಜಮೆ ಮಾಡಿದ ಸಿಎಂ

author img

By

Published : Oct 16, 2020, 12:44 PM IST

Cm yediyurappa
Cm yediyurappa

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳೆ ಹಾನಿಗೊಳಗಾದ 51,810 ರೈತರ ಬ್ಯಾಂಕ್ ಖಾತೆಗಳಿಗೆ 36.57 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಜಮೆ ಮಾಡಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ 51,810 ರೈತರ ಬ್ಯಾಂಕ್ ಖಾತೆಗಳಿಗೆ 36.57 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಆನ್ ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಮೆ ಮಾಡಿದರು.

ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಆಯುಕ್ತ ಮನೋಜ್ ರಾಜನ್, ಕಂದಾಯ ಇಲಾಖೆ (ಪರಿಹಾರ ಮತ್ತು ಪುನರ್ವಸತಿ) ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಉಪಸ್ಥಿತಿಯಲ್ಲಿ ಇನ್ ಪುಟ್ ಸಬ್ಸಿಡಿ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ಜಮೆ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.