ETV Bharat / state

ಲೋಕಸಭೆ ಚುನಾವಣೆಗಷ್ಟೇ ಮೈತ್ರಿ ಮಾಡಿಕೊಂಡಿದ್ವಿ: ದಿನೇಶ್​ ಗುಂಡೂರಾವ್​

author img

By

Published : Sep 5, 2019, 8:46 PM IST

Updated : Sep 5, 2019, 11:00 PM IST

ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಜಾತ್ಯತೀತ ಶಕ್ತಿಗಳು ಒಂದಾಗಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಗಿತ್ತು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದದ್ದು ಕೇವಲ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ತುಮಕೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಇದ್ದದ್ದು ಕೇವಲ ಲೋಕಸಭಾ ಚುನಾವಣೆಯಲ್ಲಿ ಮಾತ್ರ. ಇನ್ನುಳಿದಂತೆ 224 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಗಮನಹರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಜಾತ್ಯತೀತ ಶಕ್ತಿಗಳು ಒಂದಾಗಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರಲಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ಅನರ್ಹ ಶಾಸಕರ ಕುರಿತು ನ್ಯಾಯಾಲಯದಲ್ಲಿ ಇದುವರೆಗೂ ತೀರ್ಮಾನವಾಗಿಲ್ಲ. ಬಿಜೆಪಿಯವರು ಅತೃಪ್ತ ಶಾಸಕರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ಎಂಬುದು ಇದುವರೆಗೂ ಸ್ಪಷ್ಟವಾಗಿಲ್ಲ ಎಂದರು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ನಡೆದ ಲೋಕಸಭೆ ಚುನಾವಣೆ ವೇಳೆ ತುಮಕೂರು, ಕೋಲಾರ, ಮಂಡ್ಯ, ಹಾಸನ, ಮೈಸೂರು ಲೋಕಸಭಾ ಕ್ಷೇತ್ರಗಳಲ್ಲಿ ನಡೆದಂತಹ ಬೆಳವಣಿಗೆ ಕುರಿತು ವರದಿಯನ್ನು ತರಿಸಿಕೊಳ್ಳಲಾಗಿದೆ. ಪಕ್ಷ ಹಿತದೃಷ್ಟಿಯಿಂದ ಸೂಕ್ತ ಸಂದರ್ಭದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಬಿಜೆಪಿ ಸರ್ಕಾರದಲ್ಲಿ ಆಂತರಿಕ ಬಿಕ್ಕಟ್ಟು, ವಿಶ್ವಾಸ ಇಲ್ಲದಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಮಾಜಿ ಶಾಸಕ ಶಫಿ ಅಹಮದ್ ಹಾಗೂ ಮತ್ತಿತರರು ಹಾಜರಿದ್ದರು.

Intro: ಜೆಡಿಎಸ್ ಜೊತೆ ಮೈತ್ರಿ ಇದ್ದದ್ದು ಲೋಕಸಭಾ ಚುನಾವಣೆಗೆ ಮಾತ್ರ...... ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ......

ತುಮಕೂರು
ಜೆಡಿಎಸ್-ಕಾಂಗ್ರೆಸ್ ಪಕ್ಷದ ಮೈತ್ರಿ ಇದ್ದದ್ದು ಕೇವಲ ಲೋಕಸಭಾ ಚುನಾವಣೆಯಲ್ಲಿ ಮಾತ್ರ ಇನ್ನುಳಿದಂತೆ 224 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಗಮನಹರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ವಿರುದ್ಧ ಜಾತ್ಯತೀತ ಶಕ್ತಿಗಳು ಒಂದಾಗಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಲಾಗಿತ್ತು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿರಲಿಲ್ಲ ಎಂದರು.
ಅನಹ ಶಾಸಕರ ಕುರಿತು ನ್ಯಾಯಾಲಯದಲ್ಲಿ ಇದುವರೆಗೂ ತೀರ್ಮಾನವಾಗಿಲ್ಲ. ಬಿಜೆಪಿಯವರು ಅತೃಪ್ತ ಶಾಸಕರನ್ನು ಯಾವ ರೀತಿ ನಡೆಸಿಕೊಳ್ಳುತ್ತಾರೆ ಎಂಬುದು ಇದುವರೆಗೂ ಸ್ಪಷ್ಟವಾಗಿಲ್ಲ ಎಂದರು.
ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ನಡೆದ ಲೋಕಸಭೆ ಚುನಾವಣೆ ವೇಳೆ ತುಮಕೂರು ಕೋಲಾರ ಮಂಡ್ಯ ಹಾಸನ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ನಡೆದಂತಹ ಬೆಳವಣಿಗೆ ಕುರಿತು ವರದಿಯನ್ನು ತರಿಸಿಕೊಳ್ಳಲಾಗಿದೆ. ಪಕ್ಷ ಹಿತದೃಷ್ಟಿಯಿಂದ ತೀರ್ಮಾನವನ್ನು ಸೂಕ್ತ ಸಂದರ್ಭದಲ್ಲಿ ತೆಗೆದುಕೊಳ್ಳಲಾಗುವುದು ಎಂದರು.
ಬಿಜೆಪಿ ಸರ್ಕಾರದಲ್ಲಿ ಆಂತರಿಕ ಬಿಕ್ಕಟ್ಟು ವಿಶ್ವಾಸ ಇಲ್ಲದಂತಹ ಒಂದು ವಾತಾವರಣ ನಿರ್ಮಾಣವಾಗಿದೆ ಎಂದು ಇದೇವೇಳೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ ಮಾಜಿ ಶಾಸಕ ಶಫಿ ಅಹಮದ್ ಹಾಗೂ ಮತ್ತಿತರರು ಹಾಜರಿದ್ದರು.





Body:ತುಮಕೂರು


Conclusion:
Last Updated : Sep 5, 2019, 11:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.