ತುಮಕೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬೆಂಗಳೂರಿನಿಂದ ದಾವಣಗೆರೆಗೆ ತೆರಳುವ ಮಾರ್ಗಮಧ್ಯೆ ಶಿರಾ ಪಟ್ಟಣದ ಸಮೀಪದಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಉಪಹಾರ ಸೇವಿಸಿದರು.
ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಸಿಎಂ ಬೊಮ್ಮಾಯಿ ತೆರಳಿದ್ದರು. ಈ ಮಧ್ಯೆ ಯಾವುದೇ ಭದ್ರತೆ ಇಲ್ಲದೆ ಹೋಟೆಲ್ಗೆ ಹೋಗಿ ಉಪಹಾರ ಸೇವಿಸಿದ್ದಾರೆ.
ಇನ್ನೊಂದೆಡೆ, ಪ್ರೋಟೋಕಾಲ್ ಪ್ರಕಾರ ಮುಖ್ಯಮಂತ್ರಿಗಳಿಗೆ ನೀಡಬೇಕಾದಂತಹ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಸಿಬ್ಬಂದಿ ನಿರ್ವಹಣೆ ಮಾಡಿದ್ದು, ಗಮನಾರ್ಹವಾಗಿತ್ತು.