ETV Bharat / state

ತುಮಕೂರು: ಗಣೇಶೋತ್ಸವದಲ್ಲಿ ವೀರ ಸಾವರ್ಕರ್ ಭಾವಚಿತ್ರವುಳ್ಳ ಕೇಸರಿ ಧ್ವಜ ಬಳಸಲು ನಿರ್ಧಾರ

author img

By

Published : Aug 28, 2022, 6:03 PM IST

saffron flag with Veera Savarkar portrait on Ganeshotsava
ವೀರ ಸಾವರ್ಕರ್ ಭಾವಚಿತ್ರವುಳ್ಳ ಕೇಸರಿ ಧ್ವಜ ಬಳಸಲು ನಿರ್ಧಾರ

ತುಮಕೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ನೇತೃತ್ವದಲ್ಲಿ ಗಣೇಶ ಉತ್ಸವವನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಅಷ್ಟೇ ಅಲ್ಲದೇ ವೀರ ಸಾವರ್ಕರ್​ ಭಾವಚಿಚಿತ್ರವುಳ್ಳ ಧ್ವಜಗಳನ್ನು ಬಳಸಲು ನಿರ್ಧರಿಸಲಾಗಿದೆ.

ತುಮಕೂರು: ನಗರದಲ್ಲಿ ಈ ಬಾರಿ ಹಿಂದೂ ಮಹಾಸಭಾ ಗಣಪತಿ ಉತ್ಸವಕ್ಕೆ ವೀರ ಸಾವರ್ಕರ್ ಭಾವಚಿತ್ರವುಳ್ಳ ಧ್ವಜಗಳನ್ನು ಬಳಸಲು ನಿರ್ಧರಿಸಲಾಗಿದ್ದು, ಅವುಗಳನ್ನು ಇಂದು ಅನಾವರಣಗೊಳಿಸಲಾಯಿತು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಗಣೇಶ ಉತ್ಸವವನ್ನು ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ. ಅದರಲ್ಲಿ ವೀರ ಸಾವರ್ಕರ್, ಭಗತ್ ಸಿಂಗ್ ಅವರ ಭಾವಚಿತ್ರಗಳುಳ್ಳ ಕೇಸರಿ ಧ್ವಜಗಳನ್ನು ಉತ್ಸವದಲ್ಲಿ ಕೊಂಡೊಯ್ಯಲು ಹಾಗೂ ಅಲ್ಲಲ್ಲಿ ಆರೋಹಣ ಮಾಡಲಾಗುತ್ತದೆ.

ನಗರದ ಟೌನ್ ಹಾಲ್ ವೃತ್ತದಲ್ಲಿರುವ ಗಣೇಶ ದೇವಸ್ಥಾನದ ಬಳಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು, ಬೃಹತ್ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಿದ್ದಾರೆ. ನಗರದ ಸುಮಾರು ಐದು ಕಡೆ ಈಗಾಗಲೇ ವೀರ ಸಾವರ್ಕರ್ ಭಾವಚಿತ್ರ ಹೊಂದಿರುವ ಕಟೌಟ್​ಗಳನ್ನು ಕೂಡ ಹಾಕಿದ್ದಾರೆ. ಅಲ್ಲದೇ ಇದೀಗ ಸಾವರ್ಕರ್ ಭಾವಚಿತ್ರ ಇರುವ ಕೇಸರಿ ಧ್ವಜಗಳನ್ನು ನಗರದ ಎಲ್ಲೆಡೆ ಹಾಕಲು ನಿರ್ಧಾರ ಮಾಡಿದ್ದಾರೆ.

saffron flag with Veera Savarkar portrait on Ganeshotsava
ವೀರ ಸಾವರ್ಕರ್ ಭಾವಚಿತ್ರವುಳ್ಳ ಕೇಸರಿ ಧ್ವಜ ಬಳಸಲು ನಿರ್ಧಾರ

ಈಗಾಗಲೇ ತುಮಕೂರು ಮಹಾನಗರ ಪಾಲಿಕೆ ವತಿಯಿಂದ ಅನುಮತಿ ಪಡೆಯದೇ ಹಾಕಿದ್ದ, ಕಟೌಟ್​​ಗಳನ್ನು ತೆರವುಗೊಳಿಸಲಾಗಿದೆ. ಇದೀಗ ಕೇಸರಿ ಧ್ವಜಗಳನ್ನು ಅದರಲ್ಲೂ ಸಹ ಸಾವರ್ಕರ್ ಚಿತ್ರವಿರುವ ಧ್ವಜಗಳನ್ನು ಹಾಕಲು ನಿರ್ಧರಿಸಿರುವುದು ಜಿಲ್ಲಾಡಳಿತಕ್ಕೆ ತಲೆಬಿಸಿ ಉಂಟುಮಾಡಿದೆ. ಗಣೇಶೋತ್ಸವ ಸಂದರ್ಭದಲ್ಲಿ ತುಮಕೂರು ನಗರದಲ್ಲಿ ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ತುಮಕೂರು ವಿವಿಯಲ್ಲಿ ವೀರ ಸಾವರ್ಕರ್ ಅಧ್ಯಯನಪೀಠ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.