ETV Bharat / state

ನಾನು ಚಿತ್ರದುರ್ಗಕ್ಕೆ ಹೋದರೆ ಮುರುಘಾ ಮಠಕ್ಕೆ ಭೇಟಿ ನೀಡಿ, ಗದ್ದುಗೆ ದರ್ಶನ ಮಾಡುವೆ: ಎಂಬಿ ಪಾಟೀಲ್​

author img

By

Published : Sep 3, 2022, 3:13 PM IST

ತುಮಕೂರಿನ ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ಎಂಬಿ ಪಾಟೀಲ್, ಜಿ ಪರಮೇಶ್ವರ್​ ಸೇರಿದಂತೆ ಕಾಂಗ್ರೆಸ್​​ ನಾಯಕರು ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ex-minister-mb-patil-reaction-on-muruga-shree-issue
ನಾನು ಚಿತ್ರದುರ್ಗಕ್ಕೆ ಹೋದರೆ ಮುರುಘಾ ಮಠಕ್ಕೆ ಭೇಟಿ ನೀಡಿ, ಗದ್ದುಗೆ ದರ್ಶನ ಮಾಡುವೆ: ಎಂಬಿ ಪಾಟೀಲ್​

ತುಮಕೂರು: ಚಿತ್ರದುರ್ಗದ ಮುರುಘಾ ಮಠದಲ್ಲಿ ಯಾರು ಇರುತ್ತಾರೆ. ಯಾರು ಇರಲ್ಲ ಅನ್ನೋದು ಮುಖ್ಯವಲ್ಲ. ನಾನು ಚಿತ್ರದುರ್ಗಕ್ಕೆ ಹೋದರೆ ಮುರುಘಾ ಮಠಕ್ಕೆ ಭೇಟಿ ನೀಡುತ್ತೇನೆ. ಗದ್ದುಗೆಯಲ್ಲಿ ದರ್ಶನ ಮಾಡಿ ಆಶೀರ್ವಾದ ಪಡೆಯುತ್ತೇನೆ ಎಂದು ಮಾಜಿ ಸಚಿವ ಎಂ ಬಿ ಪಾಟೀಲ್​ ತಿಳಿಸಿದರು.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಯದೇವ ಸ್ವಾಮಿಗಳು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಅಮಿತ್‌ ಶಾ, ರಾಹುಲ್‌ ಗಾಂಧಿ, ಬಿ.ಎಸ್​.ಯಡಿಯೂರಪ್ಪ ಒಳಗೊಂಡಂತೆ ನಾನು ಕೂಡ ಮಠಕ್ಕೆ ಭೇಟಿ ನೀಡಿದ್ದೇನೆ. ಮಠಕ್ಕೆ ಎಲ್ಲ ಪಕ್ಷದವರು ಹೋಗಿದ್ದಾರೆ. ಮುಂದೆ ಕೂಡ ಹೋಗುತ್ತಾರೆ ಎಂದರು.

ನಾನು ಚಿತ್ರದುರ್ಗಕ್ಕೆ ಹೋದರೆ ಮುರುಘಾ ಮಠಕ್ಕೆ ಭೇಟಿ ನೀಡಿ, ಗದ್ದುಗೆ ದರ್ಶನ ಮಾಡುವೆ: ಎಂಬಿ ಪಾಟೀಲ್​

ಈಗ ಸ್ವಾಮೀಜಿಯವರ ಪ್ರಕರಣ ಕೋರ್ಟ್​ನಲ್ಲಿದೆ. ತನಿಖೆ ನಡೆಯುತ್ತಿದೆ. ಸತ್ಯಾಂಶ ಹೊರಗೆ ಬರಲಿದೆ. ಸಿಗಬೇಕಾದವರಿಗೆ ನ್ಯಾಯ ಸಿಗಲಿ ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು.

ಇದನ್ನೂ ಓದಿ: ಮುರುಘಾ ಶ್ರೀಗಳ ವಿಚಾರದಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.