ತುಮಕೂರು: ತಾಲೂಕಿನ ಕುಣಿಗಲ್ನ ಭೂಸ್ವಾಧೀನಾಧಿಕಾರಿಗಳ ಕಚೇರಿಗೆ ಬೀಗ ಹಾಕಿ ದಿಢೀರ್ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆ.
ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುತ್ತ, ನ್ಯಾಯ ಕೊಡಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು. ರೈತರನ್ನು ಸಮಾಧಾನ ಪಡಿಸುವಲ್ಲಿ ಪೊಲೀಸ್ ವಿಫಲ ಯತ್ನ ನಡೆಸಿದ ಘಟನೆ ನಡೆಯಿತು.
ನೋಟಿಸ್ ಕೊಡದೆ, ಪರಿಹಾರವನ್ನು ಸೂಚಿಸದೇ ಜಮೀನು ಬಿಟ್ಟು ಹೋಗುವಂತೆ ಅಧಿಕಾರಿಗಳ ಎಚ್ಚರಿಕೆ ನೀಡಿದ್ದರಿಂದ ಆಕ್ರೋಶಗೊಂಡ ರೈತರು ಭೂಸ್ವಾಧೀನ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.