ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ: ಸಂಸತ್ತಿನಲ್ಲಿ ಕನ್ನಡಿಗ ಚಂದ್ರ ಆರ್ಯ ಖಂಡನೆ

author img

By

Published : Sep 21, 2022, 2:26 PM IST

Chandra Arya

ಕನ್ನಡಿಗ ಚಂದ್ರ ಆರ್ಯ ಅವರು ಕೆನಡಾದಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿಯ ಬಗ್ಗೆ ಸಂಸತ್ತಿನಲ್ಲಿ ಖಂಡಿಸುವ ಮೂಲಕ ಭಾರತೀಯ ಅಸ್ಮಿತೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ.

ತುಮಕೂರು: ಕೆನಡಾದಲ್ಲಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, ಕೆನಾಡದ ಟೊರೆಂಟೋದಲ್ಲಿ ಹಿಂದೂ ದೇವಾಲಯಗಳ‌ ಮೇಲೆ ನಡೆದ ದಾಳಿಯನ್ನು ಖಂಡಿಸಿದ್ದಾರೆ.

ಚಂದ್ರ ಆರ್ಯ ತುಮಕೂರು ಜಿಲ್ಲೆ ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಮೂಲದವರು. ಕೆನಡಾ ಸಂಸತ್​​ನಲ್ಲಿ ಹಿಂದೂ ದೇವಾಲಯಗಳ ಮೇಲಿನ ದಾಳಿ ವಿಷಯ ಪ್ರಸ್ತಾಪಿಸಿ ತೀವ್ರವಾಗಿ ಖಂಡಿಸಿದ್ದಾರೆ. ಟೊರೆಂಟೋದ ಸ್ವಾಮಿ ನಾರಾಯಣ, ವಿಷ್ಣು ಮಂದಿರಗಳ ಮೇಲೆ ಕೆಲ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ಭಾರತ ಸೇರಿದಂತೆ ದಕ್ಷಿಣ ಏಷ್ಯಾದಿಂದ ಸಾಕಷ್ಟು ಹಿಂದೂಗಳು ಕೆನಡಾಗೆ ಆಗಮಿಸಿದ್ದಾರೆ. ಭಾರತೀಯ ಮೂಲದ ಹಿಂದೂಗಳು ಶಾಂತಿಪ್ರಿಯರು ಹಾಗೂ ಶ್ರಮ ಜೀವಿಗಳು. ತಮ್ಮ ಮಕ್ಕಳ ಶಿಕ್ಷಣ ಸೇರಿದಂತೆ ಕುಟುಂಬದ ಉನ್ನತಿಗೆ ಶ್ರಮಿಸುತ್ತಾರೆ ಎಂದು ಹೇಳಿದರು.

ಇದನ್ನೂ ಓದಿ: ಇದಪ್ಪಾ ಭಾಷಾಭಿಮಾನ! ಕೆನಡಾ ಪಾರ್ಲಿಮೆಂಟ್​ನಲ್ಲಿ ಕನ್ನಡದ ಕಂಪು ಸೂಸಿದ ಚಂದ್ರ ಆರ್ಯ

ಆದರೆ ಕೆನಡಾದಲ್ಲಿ ಹಿಂದೂ ವಿರೋಧಿ ಗುಂಪುಗಳಿಂದ ಹಿಂದೂಗಳ ಭಾವನೆಗಳ‌ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ. ಜನಾಂಗೀಯ ದ್ವೇಷದಿಂದ ಗಲಾಟೆಗಳು, ಹಲ್ಲೆಗಳು ನಡೆಯುತ್ತಿವೆ. ಕೆನಡಾ ಸಂಸತ್ ಇದನ್ನು ಖಂಡಿಸಬೇಕು ಹಾಗೂ ಇದಕ್ಕೆ ಕಠಿಣ ಕ್ರಮಗಳನ್ನು ರೂಪಿಸಬೇಕು. ಹಿಂದೂಗಳ ಹಾಗೂ ಅವರ ಭಾವನೆಗಳ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಮ್ಮ ಸಂಸತ್ ಭಾಷಣದ ಮೂಲಕ ಒತ್ತಾಯ ಮಾಡಿದರು.

ಇದನ್ನೂ ಓದಿ: ಭಾರತಕ್ಕಿಂತ ಕೆನಡಾದಲ್ಲಿ ಪ್ರಾದೇಶಿಕ ಅಧಿಕಾರ ಹೆಚ್ಚು: ಕೆನಡಾ ಸಂಸದ ಚಂದ್ರ ಆರ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.