ETV Bharat / state

ನೂರಾರು ಕೋವಿಡ್ ಸೋಂಕಿತರನ್ನು ಉಳಿಸಿದವನ ಪತ್ನಿಯೇ ಕೋವಿಡ್​ಗೆ ಬಲಿ: ಡಿಕೆಶಿ ಸಾಂತ್ವನ

author img

By

Published : Jul 8, 2021, 7:38 PM IST

Updated : Jul 8, 2021, 8:52 PM IST

ಸೋಂಕಿನಿಂದ ಬಳಲುತ್ತಿದ್ದ ರೋಗಿಗಳಿಗೆ ಆಸರೆಯಾಗುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ಪತ್ನಿ ಸೋಂಕಿಗೆ ಬಲಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಾಂತ್ವನ ಹೇಳಿದ್ದಾರೆ.

kpcc president dks met ambulance driver family in tumkur
ನೂರಾರು ಕೋವಿಡ್ ಸೋಂಕಿತರನ್ನು ಉಳಿಸಿದವನ ಪತ್ನಿಯೇ ಕೋವಿಡ್​ಗೆ ಬಲಿ: ಡಿಕೆಶಿ ಸಾಂತ್ವನ

ತುಮಕೂರು: ಕುಣಿಗಲ್​ನ ಕೊತ್ತಗೆರೆಪಾಳ್ಯದ ಶಿವರಾಮ್ ಎಂಬುವರು ವೃತ್ತಿಯಿಂದ ಆಂಬ್ಯುಲೆನ್ಸ್ ಚಾಲಕರು. ಕೋವಿಡ್ ಸಮಯದಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು, ನೂರಾರು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಪತ್ನಿಯನ್ನು ಜೀವಂತವಾಗಿ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ಸೋಂಕಿನಿಂದ ಸತ್ತ ಕೆಲವರ ಶವಗಳತ್ತ ವಾರಸುದಾರರು ತಿರುಗಿ ನೋಡದೇ ಹೋದಾಗ ಆ ಶವಗಳ ಅಂತ್ಯ ಸಂಸ್ಕಾರವನ್ನೂ ಶಿವರಾಮ್​​ ನೆರವೇರಿಸಿದ್ದರು. ಆದರೆ ವಿಧಿ ಇವರ ಬದುಕಿನಲ್ಲೇ ಆಟವಾಡಿಬಿಟ್ಟಿತು. ಪತ್ನಿ ಲಕ್ಷ್ಮೀದೇವಿ ಸೋಂಕಿನಿಂದ ನರಳಿ ಪ್ರಾಣಬಿಟ್ಟರು.

ಶಿವರಾಮ್​ ಮನೆಗೆ ಶಿವಕುಮಾರ್​

ಇಂಥ ಮನಕಲಕುವ ವಿಷಯ ಅರಿತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಿವರಾಮ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ತಮ್ಮ ಅಳಲು ತೋಡಿಕೊಂಡಾಗ ಗದ್ಗದಿತರಾದಾಗ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಸದ್ಯಕ್ಕೆ 10 ಸಾವಿರ ರೂಪಾಯಿ ಸಹಾಯ ನೀಡಿದ್ದಲ್ಲದೇ, ಇನ್ನೂ ಹೆಚ್ಚಿನ ಸಹಕಾರ ನೀಡುವ ಭರವಸೆ ನೀಡಿದ್ದು, ಸಾಂತ್ವನ ಹೇಳಿ, ಮೃತರಿಗೆ ಸಂತಾಪ ಸೂಚಿಸಿದರು.

Last Updated : Jul 8, 2021, 8:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.