ETV Bharat / state

ಇಲ್ಲದ ಗೊಂದಲ ಸೃಷ್ಟಿಸದೆ, ದೇಶದ ಸಮಸ್ಯೆ, ಅಭಿವೃದ್ಧಿಗಳತ್ತ ಕೇಂದ್ರ ಗಮನ ಹರಿಸಲಿ.. ಪರಂ

author img

By

Published : Jan 18, 2020, 5:21 PM IST

ಅನುದಾನದ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮೊದಲಿನಿಂದಲೂ ಒತ್ತಾಯ ಮಾಡಿಕೊಂಡು ಬರಲಾಗುತ್ತಿದೆ. ಸರ್ಕಾರದಿಂದ ಬರುವ ಹಣದ ಜೊತೆಗೆ ವಿಶೇಷ ಅನುದಾನ ನೀಡಬೇಕಿದೆ. ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಇಂದು ಹುಬ್ಬಳ್ಳಿಗೆ ಬಂದಿದ್ದು, ಆ ಅನುದಾನವನ್ನು ಘೋಷಿಸಿ ಹೋಗಬೇಕು ಎಂದರು.

Let center concentrate towards country development and problems: Dr. G. Parameshwar
ಕೇಂದ್ರ ದೇಶದ ಸಮಸ್ಯೆ, ಅಭಿವೃದ್ಧಿಗಳತ್ತ ಗಮನ ಹರಿಸಲಿ:  ಡಾ. ಜಿ. ಪರಮೇಶ್ವರ್

ತುಮಕೂರು: ಹೊಸ ಕಾಯ್ದೆಗಳನ್ನು ಜಾರಿ ಮಾಡಿ ಜನರಲ್ಲಿ ಗೊಂದಲ ಹುಟ್ಟು ಹಾಕುವ ಬದಲು ಕೇಂದ್ರ ಸರ್ಕಾರ ದೇಶದ ಸಮಸ್ಯೆ, ಅಭಿವೃದ್ಧಿಗಳತ್ತ ಗಮನ ಹರಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಆದಷ್ಟು ಶೀಘ್ರವಾಗಿ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನವನ್ನು ಮತ್ತು ಎಲ್ಲಾ ಸ್ಥಾನಗಳಿಗೆ ಸದಸ್ಯರನ್ನು ನೇಮಿಸಿ ಹೈಕಮಾಂಡ್‌ ಪ್ರಕಟಣೆ ಮಾಡುವುದೆಂಬ ನಿರೀಕ್ಷೆ ಇದೆ. ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ, ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

ಅನುದಾನದ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮೊದಲಿನಿಂದಲೂ ಒತ್ತಾಯ ಮಾಡಿಕೊಂಡು ಬರಲಾಗುತ್ತಿದೆ. ಸರ್ಕಾರದಿಂದ ಬರುವ ಹಣದ ಜೊತೆಗೆ ವಿಶೇಷ ಅನುದಾನ ನೀಡಬೇಕಿದೆ. ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಇಂದು ಹುಬ್ಬಳ್ಳಿಗೆ ಬಂದಿದ್ದು, ಆ ಅನುದಾನವನ್ನು ಘೋಷಿಸಿ ಹೋಗಬೇಕು ಎಂದರು.

ಕೇಂದ್ರ ದೇಶದ ಸಮಸ್ಯೆ, ಅಭಿವೃದ್ಧಿಗಳತ್ತ ಗಮನ ಹರಿಸಲಿ: ಡಾ. ಜಿ. ಪರಮೇಶ್ವರ್

ಎಸ್​ಡಿಪಿಐ ಸಂಘಟನೆಯನ್ನು ಯಾವ ಕಾರಣಕ್ಕೆ ನಿಷೇಧ ಮಾಡಲಾಗುತ್ತಿದೆ ಎಂಬುದನ್ನು ಗೃಹ ಸಚಿವರು ತಿಳಿಸಬೇಕು. ಪೌರತ್ವಕ್ಕೆ ಈ ರೀತಿಯ ಗೊಂದಲ ಸೃಷ್ಟಿಸುವ ಅವಶ್ಯಕತೆಯಿಲ್ಲ. ಈಗಾಗಲೇ ಸಂವಿಧಾನದಲ್ಲಿ ತಿಳಿಸಿರುವ ರೀತಿ ನಡೆದುಕೊಂಡರೆ ಸಾಕಾಗುತ್ತದೆ. ಹೊಸ ರೀತಿಯ ಕಾನೂನುಗಳ ಮೂಲಕ ದೇಶದಲ್ಲಿ ಗೊಂದಲಗಳನ್ನು ಸೃಷ್ಟಿ ಮಾಡುವುದು ಸರಿಯಲ್ಲ. ದೇಶದಲ್ಲಿ ಬಡತನ, ರೈತರ ಸಮಸ್ಯೆಗಳ ಜೊತೆಗೆ ಅನೇಕ ಸಮಸ್ಯೆಗಳಿವೆ. ಜೊತೆಗೆ ರಾಜ್ಯಗಳಲ್ಲಿ ಶಿಕ್ಷಣದ ಗುಣಮಟ್ಟ ಮತ್ತಷ್ಟು ಹೆಚ್ಚಿಸಬೇಕಿದೆ. ಇವೆಲ್ಲವನ್ನೂ ಬಿಟ್ಟು ಕೇಂದ್ರ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಪರಮೇಶ್ವರ್​ ಭಾಗವಹಿಸದೆ ಇರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಸಾರಿ ಆಗಿಲ್ಲ ಮುಂದಿನ ಕೆಡಿಪಿ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

Intro:ತುಮಕೂರು:


Body:ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್, ಆದಷ್ಟು ಶೀಘ್ರವಾಗಿ ಪ್ರಾದೇಶಿಕ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನವನ್ನು ಮತ್ತು ಎಲ್ಲಾ ಸ್ಥಾನಗಳಿಗೆ ಸದಸ್ಯರನ್ನು ಪ್ರಕಟಣೆ ಮಾಡಲಾಗುವುದು ಎಂಬ ನಿರೀಕ್ಷೆಯಲ್ಲಿ ನಾವು ಇದ್ದೇವೆ, ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.

ಅನುದಾನದ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮೊದಲಿನಿಂದಲೂ ಒತ್ತಾಯ ಮಾಡಿಕೊಂಡು ಬರಲಾಗುತ್ತಿದೆ, ಸರ್ಕಾರದಿಂದ ಬರುವುದಲ್ಲದೆ ವಿಶೇಷವಾದ ಅನುದಾನ ನೀಡಬೇಕಿದೆ, ಅದನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಇಂದು ಹುಬ್ಬಳ್ಳಿಗೆ ಬಂದಿದ್ದು, ಅದನ್ನು ಘೋಷಿಸಿ ಹೋಗಬೇಕು ಎಂದರು.

ಎಸ್ ಡಿ ಪಿ ಐ ಸಂಘಟನೆಯನ್ನು ಯಾವ ಕಾರಣಕ್ಕೆ ನಿಷೇಧ ಮಾಡಲಾಗುತ್ತಿದೆ ಎಂಬುದನ್ನು ಗೃಹಸಚಿವರು ತಿಳಿಸಬೇಕು. ಪೌರತ್ವಕ್ಕೆ ಈ ರೀತಿಯ ಗೊಂದಲ ಸೃಷ್ಟಿ ಮಾಡುವ ಅವಶ್ಯಕತೆಯಿಲ್ಲ. ಈಗಾಗಲೇ ಸಂವಿಧಾನದಲ್ಲಿ ತಿಳಿಸಿರುವ ರೀತಿ ನಡೆದುಕೊಂಡರೆ ಸಾಕಾಗುತ್ತದೆ. ಹೊಸ ರೀತಿಯ ಕಾನೂನುಗಳನ್ನು ಸೃಷ್ಟಿ ಮಾಡುವುದು ಹೊಸ ರೀತಿಯ ಗೊಂದಲಗಳನ್ನು ಸೃಷ್ಟಿ ಮಾಡುವುದು ಸರಿಯಲ್ಲ. ದೇಶದಲ್ಲಿ ಬಡತನ, ರೈತರ ಸಮಸ್ಯೆಗಳ ಜೊತೆಗೆ ಅನೇಕ ರಾಜ್ಯಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಬೇಕಿದೆ. ಇವೆಲ್ಲವನ್ನೂ ಬಿಟ್ಟು ಗೊಂದಲಗಳನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಜಿಲ್ಲಾ ಪಂಚಾಯತ್ ನಲ್ಲಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ಭಾಗವಹಿಸಿರಲಿಲ್ಲ, ಇದಕ್ಕೆ ಪ್ರತಿಕ್ರಿಯಿಸಿದ ಡಾ. ಜಿ ಪರಮೇಶ್ವರ್ ಅವರು ಮುಂದಿನ ಕೆಡಿಪಿ ಸಭೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದರು.
ಬೈಟ್: ಡಾ. ಜಿ. ಪರಮೇಶ್ವರ್, ಮಾಜಿ ಉಪಮುಖ್ಯಮಂತ್ರಿ.


Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.