ETV Bharat / state

ಹಣದ ಹೊಳೆಹರಿಸಿ ತುಮಕೂರು ಗೆಲ್ಲೋದು ಅಸಾಧ್ಯ: ವಿ ಸೋಮಣ್ಣ

author img

By

Published : Mar 26, 2019, 11:39 PM IST

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲ್ಲಲಿದೆ ಎಂದ ಮಾಜಿ ಸಚಿವ ವಿ ಸೋಮಣ್ಣ.

ವಿ ಸೋಮಣ್ಣ

ತುಮಕೂರು : ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆ ಹರಿಸಿ ಗೆಲ್ಲಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪರೋಕ್ಷವಾಗಿ ಮಾಜಿ ಪ್ರಧಾನಿ ದೇವೇಗೌಡರಿಗೆ ಟಾಂಗ್ ನೀಡಿದರು. ತುಮಕೂರಿನಲ್ಲಿ ಬಿಜೆಪಿ ಪಕ್ಷ ಒಗ್ಗಟ್ಟಾಗಿದೆ. ಬಿಜೆಪಿ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ನಡೆದಿದೆ. ದೇಶ ಮೊದಲು ನಂತರ ಬೇರೆ ಎಲ್ಲಾ ಅನ್ನೋ ಸಂದೇಶ ಇದಾಗಿದೇ ಎಂದರು.

ತುಮಕೂರು ಲೋಕಸಭಾ ಕ್ಷೇತ್ರವನ್ನ ಹಣದ ಹೊಳೆಹರಿಸಿ ಗೆಲ್ಲಲು ಸಾಧ್ಯವಿಲ್ಲ: ವಿ ಸೋಮಣ್ಣ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲ್ಲಲಿದೆ. ಅಪವಿತ್ರ ಮೈತ್ರಿ ವ್ಯವಸ್ಥೆಗೆ ಜನ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯದಲ್ಲಿ 20 ರಿಂದ 22 ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಚುನಾವಣೆ ಬಳಿಕ ಮೈತ್ರಿ ಕುಸಿಯಲಿದೆ. ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ, ಈ ಕುರಿತು ಇನ್ನು ಮೂರ್ನಾಲ್ಕು ದಿನಗಳಲ್ಲಿ ತಿಳಿಯಲಿದೆ ಎಂದರು.

Intro:ತುಮಕೂರು ಲೋಕಸಭಾ ಕ್ಷೇತ್ರ ಹಣದ ಹೊಳೆಹರಿಸಿ ಗೆಲ್ಲಲು ಸಾಧ್ಯವಿಲ್ಲ ......

ಮಾಜಿ ಸಚಿವ ವಿ ಸೋಮಣ್ಣ.......

ತುಮಕೂರು
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹಣದ ಹೊಳೆಯಿಂದ ಗೆಲ್ಲಬಹುದು ಎಂದರೆ ಅದು ಸಾಧ್ಯವಿಲ್ಲ ಎಂದು ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪರೋಕ್ಷವಾಗಿ ಮಾಜಿ ಪ್ರದಾನಿ ದೇವೇಗೌಡರಿಗೆ ಟಾಂಗ್ ನೀಡಿದರು ಎಂದು ಹೇಳಬಹುದಾಗಿದೆ. ತುಮಕೂರಿನಲ್ಲಿ ಬಿಜೆಪಿ ಪಕ್ಷ ಒಗ್ಗಟ್ಟಾಗಿದೆ ಇದು ಸಂತೋಷದ ವಿಚಾರ ಬಿಜೆಪಿ ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ನಡೆದಿದೆ ದೇಶ ಮೊದಲು ತದನಂತರ ಬೇರೆ ಎಲ್ಲಾ ಅನ್ನೋ ಸಂದೇಶ ಇದಾಗಿದೇ ಎಂದರು.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಬಿಜೆಪಿ ಗೆಲ್ಲಲಿದೆ ಅಪವಿತ್ರ ಮೈತ್ರಿ ವ್ಯವಸ್ಥೆಗೆ ಜನ ತಕ್ಕ ಉತ್ತರ ನೀಡಲಿದ್ದಾರೆ. ರಾಜ್ಯದಲ್ಲಿ 20ರಿಂದ 22 ಸ್ಥಾನವನ್ನು ನಾವು ಗೆಲ್ಲುತ್ತೇವೆ.


Body:ಚುನಾವಣೆ ಬಳಿಕ ಮೈತ್ರಿ ಕುಸಿಯಲಿದೆ . ರಾಜ್ಯಕ್ಕೆ ಮೋದಿ ನಾಲ್ಕೈದು ಸಭೆಯಲ್ಲಿ ಭಾಗವಹಿಸಲು ಬರುತ್ತಾರೆ ಇನ್ನು ಮೂರ್ನಾಲ್ಕು ದಿನಗಳಲ್ಲಿ ತಿಳಿಯಲಿದೆ ಎಂದರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.