ETV Bharat / state

ಸ್ಮಾರ್ಟ್​ ಸಿಟಿ ಕಾಮಗಾರಿ ಅವ್ಯವಸ್ಥೆ: ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ

author img

By

Published : Aug 11, 2020, 8:33 PM IST

water penetrating shops
ಸ್ಮಾರ್ಟ್​ ಸಿಟಿ ಕಾಮಗಾರಿ ಅವ್ಯವಸ್ಥೆ

ತುಮಕೂರು ನಗರದ ಸ್ಮಾರ್ಟ್​ ಸಿಟಿ ಕಾಮಗಾರಿ ಸ್ಥಗಿತಗೊಂಡಿದ್ದು, ಮಳೆನೀರು ಸರಾಗವಾಗಿ ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದ ಹಿನ್ನೆಲೆ, ಅಂಗಡಿ ಮುಗ್ಗಟ್ಟುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ತುಮಕೂರು: ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳು ಒಂದೆಡೆಯಾದರೆ, ಇನ್ನೊಂದೆಡೆ ಭಾರಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ, ಚರಂಡಿ ನೀರು ಅಂಗಡಿಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

ಸ್ಮಾರ್ಟ್​ ಸಿಟಿ ಕಾಮಗಾರಿ ಅವ್ಯವಸ್ಥೆ

ಸ್ಮಾರ್ಟ್​ ಸಿಟಿ ಕಾಮಗಾರಿ ಆರಂಭವಾಗುವ ಮುನ್ನ ಮಳೆ ನೀರು ಸರಾಗವಾಗಿ ಹರಿದು ಹೋಗಲು ಪೂರಕ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದರು. ಆದರೆ ಈ ಕುರಿತು ಅಧಿಕಾರಿಗಳು ಮಾತ್ರ ಯಾವುದೇ ರೀತಿಯ ಕ್ರಮ ಕೈಗೊಳ್ಳದ ಹಿನ್ನೆಲೆ, ಮಳೆನೀರು ಅಂಗಡಿಗಳಿಗೆ ನುಗ್ಗಿ, ವ್ಯಾಪಾರಸ್ಥರು ಬದುಕು ಹೇಳತೀರದಾಗಿದೆ.

ಕೊರೊನಾ ಬಿಕ್ಕಟ್ಟಿನ ನಡುವೆ ದಿಕ್ಕೆಟ್ಟಿರುವ ವ್ಯಾಪಾರಸ್ಥರು, ಮಳೆನೀರು ತಂದೊಡ್ಡಿದ ಸಂಕಷ್ಟದಿಂದಾಗಿ ಕಂಗಾಲಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.