ETV Bharat / state

ತಿಪಟೂರು ಬಳಿ ಕೆಎಸ್​ಆರ್​ಟಿಸಿ ಬಸ್-ಕಾರು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

author img

By

Published : Jul 7, 2022, 12:09 PM IST

ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ಮಧ್ಯೆ ಬೀಕರ ಅಪಘಾತ- ಇಬ್ಬರು ದುರ್ಮರಣ- ತಿಪಟೂರು ತಾಲೂಕಿನಲ್ಲಿ ದುರ್ಘಟನೆ

two-killed-as-ksrtc-bus-and-car-collided-near-tipaturu
ಕೆಎಸ್​ಆರ್​ಟಿಸಿ ಬಸ್-ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ತುಮಕೂರು: ಕೆಎಸ್​ಆರ್​ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಬಿದರೆಗುಡಿಯ ಮತ್ತಿಹಳ್ಳಿ ಬಳಿ ಸಂಭವಿಸಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ‌ ಹೋಗುತ್ತಿದ್ದ ಬಸ್, ತುಮಕೂರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಮತ್ತಿಹಳ್ಳಿಯ ತಿರುವಿನಲ್ಲಿ ಅವಘಡ ಸಂಭವಿಸಿದ್ದು, ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನವಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಜನ್ಮ ನೀಡಿದ ತಂದೆಯನ್ನೇ ಕೊಲೆಗೈದ ಮಗ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.