ETV Bharat / state

ಪಶುವೈದ್ಯ ಆಸ್ಪತ್ರೆಗಳಿಗೆ ಶೀಘ್ರ ಕಂಪ್ಯೂಟರ್‌,ಇಂಟರ್‌ನೆಟ್‌ ವ್ಯವಸ್ಥೆ- ಇಲಾಖೆ ಆಯುಕ್ತರ ಭರವಸೆ

author img

By

Published : Apr 28, 2019, 1:53 PM IST

ವಿಶ್ವ ಪಶುವೈದ್ಯಕೀಯ ದಿನಾಚರಣೆ

ತುಮಕೂರಿನ ಸಿದ್ಧಗಂಗಾ ಕಾಲೇಜಿನಲ್ಲಿ ಜಿಲ್ಲಾ ಪಶು ವೈದ್ಯಕೀಯ ಇಲಾಖೆ ಹಾಗೂ ಪಶುವೈದ್ಯರ ಸಂಘಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪಶು ವೈದ್ಯಕೀಯ ದಿನ ಆಚರಿಸಲಾಯಿತು.

ತುಮಕೂರು: ರಾಜ್ಯದ ಎಲ್ಲಾ ಪಶುವೈದ್ಯ ಆಸ್ಪತ್ರೆಗಳಿಗೆ ಅಗತ್ಯವಿರುವ ಕಂಪ್ಯೂಟರ್ ಹಾಗೂ ಇಂಟರ್ನೆಟ್ ವ್ಯವಸ್ಥೆಯನ್ನು ಮುಂದಿನ ವರ್ಷದಿಂದ ಕಲ್ಪಿಸಲಾಗುವುದು ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್ ಭರವಸೆ ನೀಡಿದರು.

ವಿಶ್ವ ಪಶು ವೈದ್ಯಕೀಯ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಪಶುವೈದ್ಯ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, 2,800 ಕಂಪ್ಯೂಟರ್​​​ಗಳನ್ನು ನೀಡಲು ಇಗಾಗಲೇ ಪ್ರಸ್ತಾಪಿಸಲಾಗಿದೆ. ಸರ್ಕಾರದಿಂದ ಮಂಜೂರಾದ ತಕ್ಷಣವೇ ಎಲ್ಲಾ ಆಸ್ಪತ್ರೆಗಳಿಗೂ ಸರಬರಾಜು ಮಾಡಲಾಗುವುದು. ಇಲಾಖೆಯ ಐದು ವಿವಿಧ ಕಾರ್ಯಕ್ರಮಗಳನ್ನು ಸಕಾಲಕ್ಕೆ ಜಾರಿಗೆ ತರುತ್ತಿದ್ದು, ಕೆಲಸ ಮಾಡಲು ಕಂಪ್ಯೂಟರ್​​ಗಳು ಅತ್ಯವಶ್ಯಕ ಎಂದರು.

ವಿಶ್ವ ಪಶು ವೈದ್ಯಕೀಯ ದಿನಾಚರಣೆ

ಮೇವು ಬ್ಯಾಂಕ್ ಮತ್ತು ಗೋಶಾಲೆ ನಿರ್ವಹಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 31 ಜನರ ಪಶು ವೈದ್ಯರ ಮೇಲೆ ಲೋಕಾಯುಕ್ತದಲ್ಲಿರುವ ದೂರಿನ ಬಗ್ಗೆ ಕೂಲಂಕಶವಾಗಿ ಪರಿಶೀಲಿಸಿ, ತಪ್ಪು ಮಾಡದೇ ಇರುವ ವೈದ್ಯರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಉಪೇಂದ್ರ ಪ್ರತಾಪ್ ಸಿಂಗ್ ವೈದ್ಯಾಧಿಕಾರಿಗಳಿಗೆ ಭರವಸೆ ಕೊಟ್ಟರು.

ಪಶುವೈದ್ಯಕೀಯ ಇಲಾಖೆಯ ನಿರ್ದೇಶಕ ಎಂ.ಟಿ ಮಂಜುನಾಥ್ ಮಾತನಾಡಿ, ವೈದ್ಯಕೀಯ ಸಿಬ್ಬಂದಿ ಶಿಕ್ಷಣ ಮುಗಿಸಿ ಇಲಾಖೆಗೆ ಸೇರಿದ ನಂತರವೇ ನಿಜವಾದ ಕಲಿಕೆ ಆರಂಭವಾಗುತ್ತದೆ. ಸರ್ಕಾರ ಮತ್ತು ರೈತರು, ಸಾರ್ವಜನಿಕರೊಂದಿಗೆ ಹೇಗೆ ವರ್ತಿಸುತ್ತೀರಿ ಎಂಬುದರ ಮೇಲೆ ನಿಮ್ಮ ವೃತ್ತಿ ಜೀವನದ ಏಳು-ಬೀಳುಗಳು ಇರುತ್ತವೆ. ರೈತರಿಗೆ, ಜಾನುವಾರುಗಳ ಮಾಲೀಕರಿಗೆ ನಿಮ್ಮ ಸೇವೆ ತೃಪ್ತಿಯಾಗುವಂತೆ ಇರಬೇಕು ಎಂದು ಸಿಬ್ಬಂದಿ, ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

Intro:ತುಮಕೂರು: ರಾಜ್ಯದ ಎಲ್ಲಾ ಪಶುವೈದ್ಯ ಆಸ್ಪತ್ರೆಗಳಿಗೆ ಅಗತ್ಯವಿರುವ ಕಂಪ್ಯೂಟರ್ ಹಾಗೂ ಇಂಟರ್ನೆಟ್ ವ್ಯವಸ್ಥೆಯನ್ನು ಮುಂದಿನ ವರ್ಷದಲ್ಲಿ ಕಲ್ಪಿಸಲಾಗುವುದು ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಆಯುಕ್ತರಾದ ಉಪೇಂದ್ರ ಪ್ರತಾಪ್ ಸಿಂಗ್ ಭರವಸೆ ನೀಡಿದರು.


Body:ನಗರದ ಸಿದ್ಧಗಂಗಾ ಕಾಲೇಜಿನಲ್ಲಿ ಜಿಲ್ಲಾ ಪಶು ವೈದ್ಯಕೀಯ ಇಲಾಖೆ ಹಾಗೂ ಪಶುವೈದ್ಯರ ಸಂಘಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪಶುವೈದ್ಯಕೀಯ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಎಲ್ಲಾ ಪಶುವೈದ್ಯ ಆಸ್ಪತ್ರೆಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, 2,800 ಕಂಪ್ಯೂಟರ್ ಗಳನ್ನು ನೀಡಲು ಇಗಾಗಲೇ ಪ್ರಸ್ತಾಪಿಸಲಾಗಿದೆ, ಸರ್ಕಾರದಿಂದ ಮಂಜೂರಾದ ತಕ್ಷಣವೇ ಎಲ್ಲಾ ಆಸ್ಪತ್ರೆಗಳಿಗೂ ಸರಬರಾಜು ಮಾಡಲಾಗುವುದು.
ಇಲಾಖೆಯ ಐದು ವಿವಿಧ ಕಾರ್ಯಕ್ರಮಗಳನ್ನು ಸಕಾಲಕ್ಕೆ ತರುತ್ತಿದ್ದು, ಈ ಕೆಲಸ ಮಾಡಲು ಕಂಪ್ಯೂಟರ್ಗಳು ಅತ್ಯವಶ್ಯಕ ಎಂದರು.
ಪಶುವೈದ್ಯರು ರಾಸುಗಳಿಗೆ ಬರುವ ರೋಗಗಳನ್ನು ತಡೆಗಟ್ಟುವುದು, ರೋಗ ಬಾರದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ ಪಶು ಸಂಪತ್ತನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದೆ, ಇಂದಿನ ಬರಗಾಲದ ಪರಿಸ್ಥಿತಿಯಲ್ಲಿ ರೈತರು ಹೈನುಗಾರಿಕೆ, ಪಶುಸಂಗೋಪನೆಯ ಹೆಚ್ಚು ಅವಲಂಬಿತರಾಗಿರುತ್ತಾರೆ, ಆದುದರಿಂದ ಈ ನಿಟ್ಟಿನಲ್ಲಿ ಪಶುವೈದ್ಯಾಧಿಕಾರಿಗಳು ಗಮನಹರಿಸಬೋಕಿದೆ ಎಂದರು.
ಇನ್ನೂ ಮೇವು ಬ್ಯಾಂಕ್ ಮತ್ತು ಗೋಶಾಲೆ ನಿರ್ವಹಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 31 ಜನರ ಪಶು ವೈದ್ಯರ ಮೇಲೆ ಲೋಕಾಯುಕ್ತ ದಲ್ಲಿರುವ ದೂರಿನ ಬಗ್ಗೆ ಕುಲಂಕುಶವಾಗಿ ಪರಿಶೀಲನೆ ನಡೆಸಿ, ಯಾವುದೇ ತಪ್ಪು ಮಾಡದೇ ಇರುವ ವೈದ್ಯರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್ ವೈದ್ಯಾಧಿಕಾರಿಗಳಿಗೆ ಭರವಸೆ ನೀಡಿದರು.


Conclusion:ಪಶುವೈದ್ಯಕೀಯ ಇಲಾಖೆಯ ನಿರ್ದೇಶಕ ಎಂ.ಟಿ ಮಂಜುನಾಥ್ ಮಾತನಾಡಿ, ವೈದ್ಯಕೀಯ ಸಿಬ್ಬಂದಿ ಶಿಕ್ಷಣ ಮುಗಿಸಿ ಇಲಾಖೆಗೆ ಸೇರಿದ ನಂತರವೇ ನಿಜವಾದ ಕಲಿಕೆ ಆರಂಭವಾಗುತ್ತದೆ.
ಸರಕಾರ ಮತ್ತು ರೈತರು, ಸಾರ್ವಜನಿಕರೊಂದಿಗೆ ಹೇಗೆ ವರ್ತಿಸುತ್ತೀರಿ ಎಂಬುದರ ಮೇಲೆ ನಿಮ್ಮ ವೃತ್ತಿ,ಜೀವನದ ಏಳು -ಬೀಳು ಇರುತ್ತದೆ. ರೈತರ ದೂರುಗಳನ್ನು ಋಣಾತ್ಮಕವಾಗಿ ಪರಿಗಣಿಸಿ, ಸರ್ಕಾರಕ್ಕಿಂತ ರೈತರಿಗೆ, ಜಾನುವಾರುಗಳ ಮಾಲೀಕರಿಗೆ ನಿಮ್ಮ ಸೇವೆ ತೃಪ್ತಿಯಾಗುವಂತೆ ಇರಬೇಕು ಎಂದು ಸಿಬ್ಬಂದಿಗಳಿಗೆ ಹಾಗೂ ವೈದ್ಯಾಧಿಕಾರಿಗಳಿಗೆ ಸಲಹೆ ನೀಡಿದರು.

ವರದಿ
ಸುಧಾಕರ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.