ತಾಯಿ ಮನೆಯಲ್ಲಿದ್ದ ಹೆಂಡತಿ ಕರೆಸಿ ಹತ್ಯೆ; ಗಂಡನೂ ಆತ್ಮಹತ್ಯೆ

author img

By

Published : Aug 22, 2022, 7:56 PM IST

ಉಡುಪಿಯಲ್ಲಿ ಗಂಡ ಹಾಗೂ ಹೆಂಡತಿ ಸಾವು

ತನ್ನ ತಾಯಿ ಮನೆಯಲ್ಲಿದ್ದ ಹೆಂಡತಿ ಕರೆಸಿ ಹತ್ಯೆ ಮಾಡಿರುವ ಘಟನೆ ಉಡುಪಿಯಲ್ಲಿ ಜರುಗಿದೆ. ಹೆಂಡತಿಯನ್ನು ಹತ್ಯೆ ಮಾಡಿದ ನಂತರ ಪತಿಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉಡುಪಿ : ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪ ನಡೆದಿದ್ದು, ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ, ಕೋಗಾರ್ ನಿವಾಸಿ ರವಿ ಆಚಾರ್ಯ (42) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.

ಸೊರಬದ ತಾಯಿಯ ಮನೆಯಲ್ಲಿ ವಾಸವಿದ್ದ ಪೂರ್ಣಿಮಾ, ಭಾನುವಾರ ಹೆಮ್ಮಾಡಿ ಸಮೀಪದ ಸಂಬಂಧಿಕರ ಸೀಮಂತ ಕಾರ್ಯಕ್ರಮಕ್ಕಾಗಿ ದೇವಲ್ಕುಂದಕ್ಕೆ ಬಂದಿದ್ದರು. ಪತಿ ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದು, ಪೂರ್ಣಿಮಾ ಕಾರ್ಯಕ್ರಮ ಮುಗಿದ ಬಳಿಕ ಪತಿ ನೆಲೆಸಿದ್ದ ಬಾಡಿಗೆ ಮನೆಗೆ ತೆರಳಿದ್ದರು.

ಪ್ರಕರಣದ ವಿವರ: ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾ‌ ಮೂಲದ ರವಿ ಆಚಾರ್ಯ ಪೂರ್ಣಿಮಾರೊಂದಿಗೆ ವಿವಾಹವಾಗಿದ್ದರು. ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ರವಿ ಆಚಾರ್ಯ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಈತನ ಕುಡಿತದ ಚಟದಿಂದ ರೋಸಿ ಮಹಿಳೆ ತನ್ನ ತಾಯಿ ಮನೆಯಲ್ಲಿ ಬಂದು ನೆಲೆಸಿದ್ದರು.

ತಾಯಿ ಮನೆಯಲ್ಲಿದ್ದ ಹೆಂಡತಿ ಕರೆಸಿ ಹತ್ಯೆ

ಭಾನುವಾರ ರಾತ್ರಿಯಿಂದ ಸೊರಬದಲ್ಲಿ ನೆಲೆಸಿರುವ ಮಕ್ಕಳು ತಾಯಿಗೆ ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿರಲಿಲ್ಲ. ಹೀಗಾಗಿ ಅನುಮಾನಗೊಂಡ ಪೂರ್ಣಿಮಾ ಅವರ ತಾಯಿ ಹೆಮ್ಮಾಡಿಯಲ್ಲಿರುವ ತಮ್ಮ ಸಂಬಂಧಿಕರಿಗೆ ಕರೆ ಮಾಡಿ ಮನೆಗೆ ಹೋಗಿ ನೋಡಿ ಬರುವಂತೆ ತಿಳಿಸಿದ್ದರು. ಸಂಬಂಧಿಕರು ರಾತ್ರಿ ಹೋಗಿ ನೋಡಿದಾಗ ಲೈಟ್ ಆಫ್ ಇದ್ದ ಕಾರಣ ಮಲಗಿರಬಹುದು ಎಂದು ಅಂದಾಜಿಸಿ ವಾಪಸಾಗಿದ್ದರು. ಆದರೆ, ಬೆಳಗ್ಗೆಯೂ ಕರೆ ಸ್ವೀಕರಿಸದ ಹಿನ್ನೆಲೆ ಮತ್ತೆ ಹೋಗಿ ನೋಡಿದಾಗ ಬಾಗಿಲು ಲಾಕ್ ಆಗಿತ್ತು. ಅನುಮಾನಗೊಂಡು ಕಿಟಕಿಯಿಂದ ನೋಡಿದಾಗ ಪೂರ್ಣಿಮಾ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಬಳಿಕ ಹೆಂಚು ತೆಗೆದು ಒಳಗೆ ಹೋಗಿ ನೋಡಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಶಾಪಿಂಗಿಗೆ ಕರೆದೊಯ್ಯದ ಪೋಷಕರು: ಮನೆಯಲ್ಲಿ ಬಾಲಕಿ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.