ತಮಿಳುನಾಡಿನವರು ಮೋದಿ ಜನ್ಮದಿನಕ್ಕೆ ಕೊಟ್ಟ ಉಡುಗೊರೆಗೆ ಉಡುಪಿಯಲ್ಲಿ ನಿರಂತರ ಪೂಜೆ!

author img

By

Published : Sep 16, 2022, 9:00 PM IST

gift given by Tamil Nadu to Modi worship in Udupi

ಪ್ರಧಾನಿಯವರು ವಿವಿಧೆಡೆ ಭೇಟಿ ನೀಡಿದಾಗ ದೊರಕುವ ಉಡುಗೊರೆ, ಐಷರಾಮಿ ವಸ್ತುಗಳು ಹಾಗು ಇನ್ನಿತರ ಎಲ್ಲಾ ವಸ್ತುಗಳನ್ನು ಹರಾಜು ಹಾಕಿ, ಅದರಿಂದ ಬರುವ ಹಣವನ್ನು ಉತ್ತಮ ಕಾರ್ಯಕ್ಕೆ ವಿನಿಯೋಗಿಸುವುದು ವಾಡಿಕೆ. ಈ ಹರಾಜಿನಲ್ಲಿ ಉಡುಪಿ ವ್ಯಕ್ತಿಯೊಬ್ಬರು ತಮಿಳುನಾಡಿನವರು ಕೊಟ್ಟ ದೇವರ ಫೋಟೋ ಖರೀದಿಸಿ ಪೂಜೆ ಮಾಡುತ್ತಿದ್ದಾರೆ.

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿ ಕಾರ್ತೀಕೆಯ ದೇವರ ಫೋಟೋವನ್ನು ತಮಿಳುನಾಡು ಮೂಲದವರು ಉಡುಗೊರೆ ರೂಪದಲ್ಲಿ ನೀಡಿದ್ದರು. ಆದರೆ, ಈ ಫೋಟೋ ಈಗ ಉಡುಪಿಯಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ರೂಪದಲ್ಲಿ ನೀಡಿದ ದೇವರ ಫೋಟೋವನ್ನು ಉಡುಪಿ ಅಂಬಲಪಾಡಿಯ ನಿವಾಸಿ ಲೆಕ್ಕಪರಿಶೋಧಕರಾದ ಕೆ.ರಂಗನಾಥ್ ಆಚಾರ್ ಹರಾಜಿನಲ್ಲಿ ಖರೀದ್ದಾರೆ.

ಪ್ರಧಾನಿಯವರು ವಿವಿಧೆಡೆ ಭೇಟಿ ನೀಡಿದಾಗ ದೊರಕುವ ಉಡುಗೊರೆ, ಐಷರಾಮಿ ವಸ್ತುಗಳು ಹಾಗೂ ಇನ್ನಿತರ ಎಲ್ಲ ವಸ್ತುಗಳನ್ನು ಹರಾಜು ಹಾಕಿ, ಅದರಿಂದ ಬರುವ ಹಣವನ್ನು ಉತ್ತಮ ಕಾರ್ಯಕ್ಕೆ ವಿನಿಯೋಗಿಸುವುದು ವಾಡಿಕೆ. ಅದರಂತೆ 2021 ರಲ್ಲಿ ಕೇಂದ್ರ ಸರಕಾರ ಪ್ರಧಾನಿಯವರ ಉಡುಗೊರೆಯ ಹರಾಜಿನಿಂದ ಬಂದ ಹಣವನ್ನು ನಮಾಮಿ ಗಂಗಾ ಯೋಜನೆಗೆ ಬಳಸುತ್ತೇವೆ ಎಂದು ಘೋಷಿಸಿದ್ದರು.

ತಮಿಳುನಾಡಿನವರು ಮೋದಿ ಜನ್ಮದಿನಕ್ಕೆ ಕೊಟ್ಟ ಉಡುಗೊರೆಗೆ ಉಡುಪಿಯಲ್ಲಿ ನಿರಂತರ ಪೂಜೆ!

ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಿದ ರಂಗನಾಥ್ ಆಚಾರ್ ಮೋದಿಯವರ ಹುಟ್ಟುಹಬ್ಬಕ್ಕೆ ತಮಿಳುನಾಡು ಮೂಲದವರು ನೀಡಿದ ಕಾರ್ತಿಕೇಯ ದೇವರ ಫೋಟೋವನ್ನು ಖರೀದಿಸಿದ್ದಾರೆ. ಹರಾಜು ಪ್ರಕ್ರಿಯೆಯ ದಿನಾಂಕ ಮುಗಿದ ಮೂರು ವಾರಗಳ ನಂತರ ಕಾರ್ತಿಕೇಯನ ಫೋಟೋ ಜಾಗರೂಕವಾಗಿ, ಸ್ಪೀಡ್ ಪೋಸ್ಟ್ ನಲ್ಲಿ ದೆಹಲಿಯಿಂದ ಉಡುಪಿಗೆ ಬಂದಿದೆ.

'ಸ್ಥಳೀಯ ಪತ್ರಿಕೆಯೊಂದರಲ್ಲಿ ಹರಾಜಿನ ಬಗ್ಗೆ ಮಾಹಿತಿ ತಿಳಿದು ನಾನು ಭಾಗವಹಿಸಿದ್ದೆ. ನನಗೆ ಮೆಚ್ಚುಗೆ ಯಾದ ಸುಬ್ರಹ್ಮಣ್ಯ ದೇವರ ಪೋಟೊವನ್ನು ಖರೀದಿಸಿದ್ದೇನೆ. ಈ ಹಣವನ್ನು ನಮಾಮಿ ಗಂಗಾ ಯೋಜನೆಗೆ ಬಳಸುತ್ತಾರೆ ಎಂಬ ವಿಚಾರ ತಿಳಿದು ಸಂತೋಷವಾಯಿತು' ಎಂದು ರಂಗನಾಥ್ ತಿಳಿಸಿದ್ದಾರೆ.

ಇದನ್ನೂ ಓದಿ : ಅಂತಾರಾಷ್ಟ್ರೀಯ ನೆಟ್​ಬಾಲ್ ಕ್ರೀಡಾಪಟು ಕೊಡಗಿನ ಮೇಘನಾಗೆ ಅದ್ದೂರಿ ಸ್ವಾಗತ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.