ETV Bharat / state

'ರಮೇಶ್‌ ಜಾರಕಿಹೊಳಿ ಪ್ರಕರಣದಲ್ಲಿ ಆ ಹೆಣ್ಣುಮಗಳ ವರ್ತನೆ ನೋಡಿದ್ರೆ ಇಚ್ಛೆಪಟ್ಟು ಹೋಗಿದ್ದಾಳೆ ಎಂಬ ಭಾವನೆ ಬರುತ್ತೆ'

author img

By

Published : Jul 5, 2021, 7:18 PM IST

Updated : Jul 5, 2021, 7:38 PM IST

KC Madhuswamy
ಸಚಿವ ಕೆ.ಸಿ.ಮಾಧುಸ್ವಾಮಿ

ರಮೇಶ್​ ಜಾರಕಿಹೊಳಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನೂ ತೊಂದರೆ ಮಾಡಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ ಎಂದು ಸಣ್ಣ ನೀರಾವರಿ ಸಚಿವ ಕೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಉಡುಪಿ: ಸಮ್ಮತಿಯಿಂದ ನಡೆದ ದೈಹಿಕ ಸಂಪರ್ಕ ಅಪರಾಧವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ರಮೇಶ್​ ಜಾರಕಿಹೊಳಿ ಪ್ರಕರಣದಲ್ಲಿ ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾಳೆ ಎನ್ನುವ ಭಾವನೆ ಬರುತ್ತದೆ. ಹಾಗಾಗಿ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಎಂದು ಸಣ್ಣ ನೀರಾವರಿ ಸಚಿವ ಕೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ರಮೇಶ್​ ಜಾರಕಿಹೊಳಿ ಪ್ರಕರಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಕೆ.ಸಿ.ಮಾಧುಸ್ವಾಮಿ

ಜಾರಕಿಹೊಳಿ ಸಹೋದರರ ಮಹತ್ವದ ರಾಜಕೀಯ ನಿರ್ಧಾರ ಕುರಿತು ಮಾತನಾಡಿದ ಅವರು, ರಮೇಶ್​ ಜಾರಕಿಹೊಳಿಗೆ ಸರ್ಕಾರ ಮತ್ತು ಪಕ್ಷದ ಕಡೆಯಿಂದ ಏನೂ ತೊಂದರೆ ಮಾಡಿಲ್ಲ. ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ. ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದೊಂದು ಕಾನೂನಾತ್ಮಕ ಮತ್ತು ನೈತಿಕ ವಿಚಾರ. ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. ಕಾನೂನಾತ್ಮಕವಾಗಿ ಸಮಸ್ಯೆ ಇದೆ ಎಂದು ಅನಿಸುತ್ತಿಲ್ಲ. ಎಲ್ಲವನ್ನು ಎದುರಿಸಲೇಬೇಕು, ನ್ಯಾಯಾಲಯದಲ್ಲಿ ಪ್ರಕರಣವಿದ್ದಾಗ ಯಾರನ್ನು ದೂರಲು ಸಾಧ್ಯವಿಲ್ಲ. ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದರು.

ಭತ್ತದ ಗದ್ದೆ ನಾಟಿ: ಜಿಲ್ಲೆಯಲ್ಲಿ ಪಾಳುಬಿದ್ದ ಕೃಷಿಭೂಮಿಯಲ್ಲಿ ನಡೆಯುತ್ತಿರುವ ಭತ್ತದ ಕೃಷಿ ಚಟುವಟಿಕೆಗೆ ಇಂದು ಕೆ.ಸಿ.ಮಾಧುಸ್ವಾಮಿ ಚಾಲನೆ ನೀಡಿದರು. ಶಾಸಕ ರಘುಪತಿ ಭಟ್ ನೇತೃತ್ವದ ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ 2,000 ಎಕರೆಗೂ ಅಧಿಕ ಬಂಜರು ಭೂಮಿಯಲ್ಲಿ ಭತ್ತದ ಕೃಷಿ ನಡೆಸಲಾಗುತ್ತಿದೆ. ನಗರದ ಕಕ್ಕುಂಜೆ ವಾರ್ಡ್​ನಲ್ಲಿ ಸುಮಾರು 100 ಎಕರೆ ಕೃಷಿ ಯೋಗ್ಯ ಭೂಮಿಯನ್ನು ಈ ಬಾರಿ ನಾಟಿ ಮಾಡಲಾಗುತ್ತದೆ.

ಪಾಳುಬಿದ್ದ ಕೃಷಿಭೂಮಿಯಲ್ಲಿ ನಡೆಯುತ್ತಿರುವ ಭತ್ತ ನಾಟಿ ಕಾರ್ಯಕ್ರಮ

ಕೃಷಿ ಚಟುವಟಿಕೆಗಳಿಗೆ ಚಾಲನೆ ನೀಡಿ ನಂತರ ಮಾತನಾಡಿದ ಸಚಿವ ಕೆ.ಸಿ ಮಾಧುಸ್ವಾಮಿ, ಭತ್ತದ ಕೃಷಿಗೆ ಪೂರಕವಾಗಬಲ್ಲ ಸಣ್ಣ ನೀರಾವರಿ ಇಲಾಖೆಯ ಅನುದಾನವನ್ನು ಮುಂದಿನ ದಿನಗಲ್ಲಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

Last Updated :Jul 5, 2021, 7:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.