ETV Bharat / state

ಉಡುಪಿಯಲ್ಲಿ ಜನತೆಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

author img

By

Published : Feb 25, 2021, 6:36 PM IST

ಉಡುಪಿ ಜಿಲ್ಲೆಯಲ್ಲಿ ಜನತೆಗೆ ಉಪಟಳ ನೀಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಕುದುರೆಮುಖ ವನ್ಯಜೀವಿ ಅರಣ್ಯಕ್ಕೆ ಬಿಟ್ಟಿದ್ದಾರೆ.

Leopard in Udupi district
ಉಡುಪಿಯಲ್ಲಿ ಜನತೆಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

ಉಡುಪಿ: ಕೊಕ್ಕರ್ಣೆ ಸಮೀಪದ ಕುದಿ ಗ್ರಾಮದ ಹೊಸಳ್ಳಿಯಲ್ಲಿ ತೋಟಕ್ಕೆ ನುಗ್ಗಿದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಉಡುಪಿಯಲ್ಲಿ ಜನತೆಗೆ ಉಪಟಳ ನೀಡುತ್ತಿದ್ದ ಚಿರತೆ ಸೆರೆ

ಈ ಭಾಗದಲ್ಲಿ ನಿರಂತರ ಚಿರತೆ ಕಾಟ ಇದ್ದ ಹಿನ್ನೆಲೆ ಹೆಬ್ರಿ ವಲಯ ಅರಣ್ಯ ಅಧಿಕಾರಿಗಳು ಕಬ್ಬಿಣದ ಬೋನ್​ ಇರಿಸಿದ್ದರು. ಈಗ ಸೆರೆಯಾಗಿರುವ ಚಿರತೆಯನ್ನು ಕುದುರೆಮುಖ ವನ್ಯಜೀವಿ ಅರಣ್ಯಕ್ಕೆ ಬಿಡಲಾಗಿದೆ.

ಈ ಚಿರತೆ ಮೂವತ್ತಕ್ಕೂ ಅಧಿಕ ಕೋಳಿಗಳು ಹಾಗೂ ಎರಡು ನಾಯಿ ಕೊಂದು ಹಾಕಿದ್ದರಿಂದ ಈ ಭಾಗದ ಜನರು ಭಯಭೀತರಾಗಿದ್ದರು. ಈಗ ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.