ETV Bharat / state

ಮುಂಬೈ, ದುಬೈನಲ್ಲಿ ತಲೆಮರೆಸಿಕೊಂಡಿದ್ದ ಕೊಲೆಯತ್ನದ ಆಪಾದಿತ 26 ವರ್ಷಗಳ ಬಳಿಕ ಬಂಧನ

author img

By

Published : Mar 19, 2021, 1:28 PM IST

Nazir Ahmed
ನಜೀರ್ ಅಹ್ಮದ್

1995ರಲ್ಲಿ ನಡೆದ ಕೊಲೆಯತ್ನ ಪ್ರಕರಣದ ಆರೋಪಿಯನ್ನ 26 ವರ್ಷಗಳ ಬಳಿಕ ಬಂಧಿಸುವಲ್ಲಿ ಮುರ್ಡೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ. ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಜೀರ್ ಅಹ್ಮದ್ (48) ಬಂಧಿತ ಆರೋಪಿ, ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ.

ಭಟ್ಕಳ: ಇಲ್ಲಿನ ನ್ಯಾಶನಲ್ ಹೈಸ್ಕೂಲ್ ಬಳಿ 1995ರಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿಯನ್ನು 26 ವರ್ಷಗಳ ಬಳಿಕ ಬಂಧಿಸುವಲ್ಲಿ ಮುರ್ಡೇಶ್ವರ ಪೊಲೀಸರು ಯಶಸ್ವಿಯಾಗಿದ್ದಾರೆ.

ಭಟ್ಕಳದ ಮದಿನಾ ಕಾಲೋನಿ ನಿವಾಸಿ ನಜೀರ್ ಅಹ್ಮದ್ (48) ಬಂಧಿತ ಆರೋಪಿಯಾಗಿದ್ದು, ಈತ ಪ್ರಕರಣದ ನಂತರ ಮುಂಬೈ ಮತ್ತು ದುಬೈಯಲ್ಲಿ ತಲೆಮರೆಸಿಕೊಂಡಿದ್ದ. ಈತನನ್ನು ಭಟ್ಕಳ ಪೊಲೀಸ್ ವೃತ್ತ ನಿರೀಕ್ಷರಾದ ಪಿಎಂ ದಿವಾಕರ ಅವರ ನೇತೃತ್ವದಲ್ಲಿ ಮುರ್ಡೇಶ್ವರ ಪಿ.ಎಸ್.ಐ ರವೀಂದ್ರ ಬಿರಾದಾರ, ಸಿಬ್ಬಂದಿ ಮಂಜುನಾಥ ಗೌಡರ್, ನಾಗರಾಜ ಮೊಗೇರ, ಲಕ್ಷಣ ಪೂಜಾರಿ, ಸಿಪಿಸಿ ಅವರಿದ್ದ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.