ಬಿಜೆಪಿಯವರು ಎಷ್ಟೇ ಟಾರ್ಗೆಟ್ ಮಾಡಿದ್ರು ಸಿದ್ದರಾಮಯ್ಯ ಹೆದರಲ್ಲ: ಆರ್ ವಿ ದೇಶಪಾಂಡೆ

author img

By

Published : Nov 24, 2022, 2:24 PM IST

deshpande

ಬಿಜೆಪಿಯವರಿಗೆ ಸಿದ್ದರಾಮಯ್ಯ ಮೇಲೆ ಭಯವಿದೆ. ಹೀಗಾಗಿ, ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದರಿಂದ ಏನು ಪ್ರಯೋಜನವಿಲ್ಲ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ಹೇಳಿದರು.

ಕಾರವಾರ(ಉತ್ತರ ಕನ್ನಡ): ಬಿಜೆಪಿಯವರಿಗೆ ಮಾಜಿ ಸಿಎಂ ಸಿದ್ದರಾಮಯ್ಯನವರ ಮೇಲೆ ಭಯ ಇರುವುದರಿಂದ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಯಾವುದಕ್ಕೂ ಹೆದರುವವರಲ್ಲ. ಕಾಂಗ್ರೆಸ್ ಪಕ್ಷದ ಎಲ್ಲರೂ ಅವರ ಪರವಾಗಿದ್ದಾರೆ ಎಂದು ಮಾಜಿ ಸಚಿವ ಆರ್.ವಿ ದೇಶಪಾಂಡೆ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೇಲೆ ಭಯವಿದೆ. ಇದೇ ಕಾರಣಕ್ಕೆ ಅನಾವಶ್ಯಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಇದರಿಂದ ಏನು ಪ್ರಯೋಜನವಿಲ್ಲ. ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ಸುಲಭವಾಗಿ ಗೆಲ್ಲಬಹುದು ಎಂದುಕೊಂಡಿದ್ದಾರೆ. ಆದ್ರೆ, ಇದು ಸಾಧ್ಯವಿಲ್ಲ. ಇಂತಹ ನೂರು ಪಕ್ಷದವರು ಟಾರ್ಗೆಟ್ ಮಾಡಿದರೂ ಅವರನ್ನು ಎದುರಿಸುವ ಸಾಮರ್ಥ್ಯ ಸಿದ್ದರಾಮಯ್ಯನವರಿಗೆ ಇದೆ ಎಂದರು.

ಕುಮಟಾದಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ವಿ ದೇಶಪಾಂಡೆ

ಇದನ್ನೂ ಓದಿ: ಮುಂದಿನ ಸ್ವಯಂಘೋಷಿತ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯಗೆ ಕ್ಷೇತ್ರ ಸಿಗದಂತಾಗಿದೆ: ಯತ್ನಾಳ್ ವ್ಯಂಗ್ಯ

ಕಳೆದ ಬಾರಿ ಪರೇಶ್ ಮೇಸ್ತಾ ಪ್ರಕರಣವನ್ನು ಬಳಸಿಕೊಂಡು ಬಿಜೆಪಿಗರು ರಾಜಕೀಯ ಮಾಡಿದ್ದರು. ಈ ಬಾರಿ ಇದರ ಬಗ್ಗೆ ಜನ ಜಾಗೃತಿ ಮೂಡಿಸುವ ಕಾರ್ಯ ಕಾಂಗ್ರೆಸ್ ಮಾಡುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸ್ಪರ್ಧೆಗೆ ಕ್ಷೇತ್ರವಿಲ್ಲ, ಅವರು ಪರದೇಶಿ ಇದ್ದಂತೆ: ಶ್ರೀರಾಮುಲು ವ್ಯಂಗ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.