ETV Bharat / state

ಮುರುಡೇಶ್ವರದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ: ಚುನಾವಣಾ ರಣಕಹಳೆಗೆ ಸಿದ್ಧತೆ

author img

By

Published : Dec 20, 2022, 10:45 AM IST

ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲು ಬಿಜೆಪಿ ಸಭೆ ಆಯೋಜನೆ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರ ನಾಯಕರು ಭಾಗಿಯಾಗಲಿದ್ದಾರೆ.

BJP state office bearers meeting in Murudeshwara
ಮುರುಡೇಶ್ವರದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ

ಕಾರವಾರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಇಂದು ಭಟ್ಕಳದ ಮುರುಡೇಶ್ವರದಲ್ಲಿ ಹಮ್ಮಿಕೊಂಡಿದ್ದು, ಅದಕ್ಕಾಗಿ ಮುರುಡೇಶ್ವರ ದೇವಸ್ಥಾನ ಆವರಣದ ಆರ್​ಎನ್​ಎಸ್ ಸಭಾಭವನದಲ್ಲಿ ಬಿಜೆಪಿ ಭರ್ಜರಿ ತಯಾರಿ ಮಾಡಿಕೊಂಡಿದೆ.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲು ಸಭೆ ಆಯೋಜನೆ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರ ನಾಯಕರು ಭಾಗಿಯಾಗಲಿದ್ದಾರೆ. ಅಲ್ಲದೆ ರಾಜ್ಯದ 160 ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ಸ್ಥಳೀಯ ನಾಯಕರು ಸ್ಥಳದಲ್ಲಿದ್ದು, ಸಿದ್ಧತೆ ನಡೆಸಿದ್ದಾರೆ. ಇನ್ನು ಸಭೆ ಹಿನ್ನೆಲೆಯಲ್ಲಿ ದೇವಸ್ಥಾನ ಸುತ್ತಮುತ್ತ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಸರ್ಕಾರದ ಸಾಧನೆ, ಅಭಿವೃದ್ಧಿ ಮುಂದಿಟ್ಟು ಬಿಬಿಎಂಪಿ ಚುನಾವಣೆ ಎದುರಿಸುತ್ತೇವೆ: ಅಶ್ವತ್ಥನಾರಾಯಣ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.