ETV Bharat / state

ಲಾರಿ-ಬೈಕ್ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

author img

By

Published : Jun 4, 2021, 12:55 PM IST

karwar
ಅಪಘಾತ

ಅಂಕೋಲಾದ ಹೊನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಕಾರವಾರ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದಾನೆ. ಅಂಕೋಲಾದ ಹೊನ್ನಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಘಟನೆ ನಡೆದಿದೆ.

karwar
ಲಾರಿ-ಬೈಕ್ ನಡುವೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಅಂಕೋಲಾ ತಾಲೂಕಿನ ಶಿರಗುಂಜಿಯ ಬೊಮ್ಮಯ್ಯ ರಾಮು ಗೌಡ (30) ಮೃತ ದುರ್ದೈವಿ. ಹಿಂಬದಿ ಸವಾರ ಮಂಜುನಾಥ ಗೌಡ (25) ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಂಕೋಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್ ಸವಾರರಿಬ್ಬರು ಅಂಕೋಲಾದಿಂದ ಯಲ್ಲಾಪುರ ಕಡೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ತೆರಳುತ್ತಿದ್ದರು. ಈ ವೇಳೆ ಹೊನ್ನಳ್ಳಿ ಬಳಿ ಲಾರಿ ಚಾಲಕ ವಾಹನವನ್ನು ಹಿಂದಕ್ಕೆ ತೆಗೆದುಕೊಳ್ಳುವಾಗ ಬೈಕ್​​ಗೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.