ETV Bharat / state

ಕಾರವಾರ: ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ

author img

By

Published : Oct 26, 2021, 4:40 PM IST

Drunken Son Killed his Father after exchanging words
ಕಾರವಾರ: ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆಗೈದ ಪಾಪಿ ಪುತ್ರ

ಮದ್ಯಪಾನ ಮಾಡಿ ಮನೆಯಲ್ಲಿ ಜಗಳ ತೆಗೆಯುತ್ತಿದ್ದ ಮಗ ಈಗ ತಂದೆಯನ್ನೇ ಕೊಂದು ಪೊಲೀಸರ ಅತಿಥಿಯಾಗಿದ್ದಾನೆ. ಕುಡಿದ ಮತ್ತಲ್ಲಿ ಜಗಳ ತೆಗೆದು ತಂದೆಯನ್ನೇ ಹತ್ಯೆ ಮಾಡಿದ್ದಾನೆ.

ಕಾರವಾರ (ಉ.ಕ): ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಜಗಳ ತೆಗೆದ ಮಗ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಸಂತೆಗುಳಿ ವ್ಯಾಪ್ತಿಯ ಕಲವೆ ಗ್ರಾಮದಲ್ಲಿ ನಡೆದಿದೆ.

ರಾಮಚಂದ್ರ ಕುಪ್ಪು ಗೌಡ (55) ಮೃತ ದುರ್ದೈವಿ.‌ ನಿತ್ಯ ಕುಡಿದು ಬರುತ್ತಿದ್ದ ಮಗ ಶ್ರೀಕಾಂತ್ ಮನೆಯಲ್ಲಿ ಜಗಳವಾಡುತ್ತಿದ್ದ. ಸೋಮವಾರ ಸಂಜೆ ಕೂಡ ಮನೆಯಲ್ಲಿ ಜಗಳವಾಡಿದ್ದು, ಈ ವೇಳೆ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ನಂತದ ಸಿಟ್ಟಿಗೆದ್ದ ಮಗ ಕತ್ತಿಯಿಂದ ತಂದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಿಣಾಮ ತೀವ್ರ ಗಾಯಗೊಂಡ ತಂದೆ ನರಳಿ ಪ್ರಾಣಬಿಟ್ಟಿದ್ದಾರೆ.

Drunken Son Killed his Father after exchanging words
ಅಪ್ಪನನ್ನೇ ಹತ್ಯೆಗೈದ ಪಾಪಿ ಪುತ್ರ

ಘಟನೆ ಕುರಿತು ಮೃತರ ಪತ್ನಿ ಸಾವಿತ್ರಿ ಕುಮಟಾ ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ಪಿಎಸ್​​​ಐ ಆನಂದ ಮೂರ್ತಿ, ರವಿ.ಗುಡ್ಡೆ, ಎಎಸ್​​​ಐ ನಾಗಾರಜಾಪ್ಪ ಆರೋಪಿಯನ್ನ ಬಂಧಿಸಿದ್ದಾರೆ.

ಇದನ್ನೂ ಓದಿ: 21 ವರ್ಷದ ಯುವತಿ ಮೇಲೆ ಅತ್ಯಾಚಾರ ಯತ್ನ: 15 ವರ್ಷದ ಬಾಲಕ ಅರೆಸ್ಟ್​..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.