ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಚಂಡಮಾರುತದ ಅಬ್ಬರ ಜೋರಾಗುತ್ತಿದ್ದು, ಕರಾವಳಿ ತಾಲೂಕುಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.
ಕಾರವಾರದಲ್ಲಿ ಬೆಳಗ್ಗೆಯಿಂದಲೇ ಗುಡುಗು ಸಹಿತ ಮಳೆ ಆರಂಭಗೊಂಡಿದ್ದು, ಅಂಕೋಲಾ, ಕುಮಟಾ ಹೊನ್ನಾವರ, ಭಟ್ಕಳ ಸೇರಿದಂತೆ ಘಟ್ಟದ ಮೇಲ್ಭಾಗದಲ್ಲಿಯೂ ಗಾಳಿ ಸಹಿತ ಮಳೆಯಾಗುತ್ತಿದೆ.
ಈಗಾಗಲೇ ಹವಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದ್ದು, ಇದರಿಂದ ಆಳ ಸಮುದ್ರಕ್ಕೆ ತೆರಳಿದ ಬೋಟ್ಗಳು ಚಂಡಮಾರುತದಿಂದಾಗಿ ವಾಪಸ್ ಆಗಿ ಮೀನುಗಾರಿಕೆ ಸಂಪೂರ್ಣ ಸ್ಥಗಿತಗೊಂಡಿದೆ.