ETV Bharat / state

ಸಿದ್ದಾಪುರದ ತಮ್ಮಣ್ಣ ಬೀಗಾರ್​ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

author img

By

Published : Aug 24, 2022, 5:03 PM IST

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಸಾಹಿತಿ ತಮ್ಮಣ್ಣ ಬೀಗಾರ್ ಅವರಿಗೆ 2022 ರ ಕೇಂದ್ರ ಸಾಹಿತ್ಯ ಪ್ರಶಸ್ತಿ ಪ್ರಕಟವಾಗಿದೆ.

ತಮ್ಮಣ್ಣ ಬೀಗಾರ್​
ತಮ್ಮಣ್ಣ ಬೀಗಾರ್​

ಶಿರಸಿ: 2022 ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಉತ್ತರ ಕನ್ನಡ ಜಿಲ್ಲೆಯ ಸಾಹಿತಿ ತಮ್ಮಣ್ಣ ಬೀಗಾರ್​ಗೆ ಪ್ರಶಸ್ತಿ ಒಲಿದಿದೆ.

ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯು ಈ ಬಾರಿ ಇಬ್ಬರು ಕನ್ನಡಿಗರಿಗೆ ದೊರೆತಿದ್ದು, ಅದರಲ್ಲಿ ಒಂದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ತಮ್ಮಣ್ಣ ಬೀಗಾರ್​ಗೆ ಸಂದಿದೆ.

ಬೀಗಾರ್ ಅವರ 'ಬಾವಲಿ ಗುಹೆ' ಎನ್ನುವ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯಕ್ಕೆ ಈ ಪ್ರಶಸ್ತಿ ದೊರೆತಿದ್ದು, ಪ್ರಶಸ್ತಿ 50,000 ನಗದು ಮತ್ತು ಸನ್ಮಾನ ಹೊಂದಿದೆ. ಬಳ್ಳಾರಿ ಜಿಲ್ಲೆಯ ಹಗರಿ ಬೊಮ್ಮನಹಳ್ಳಿಯ ದಾದಪಿರ್ ಜಯ್ಮನ್ ಅವರಿಗೆ ನೀಲಕುರಂಜಿ ಕಥಾ ಸಂಕಲನಕ್ಕೆ ಕೇಂದ್ರ ಯುವ ಸಾಹಿತ್ಯ ಪ್ರಶಸ್ತಿ ದೊರೆತಿದೆ.

ಓದಿ: ಕಮಿಷನ್ ಆರೋಪ ಬಗ್ಗೆ ಸರ್ಕಾರದ ವಿರುದ್ಧ ನ್ಯಾಯಾಂಗ ತನಿಖೆ ಮಾಡಿ: ಸಿದ್ದರಾಮಯ್ಯ ಆಗ್ರಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.