ETV Bharat / state

ಜಿಲ್ಲೆ ಇಬ್ಭಾಗದ ಕುರಿತು ಚರ್ಚೆ ಆಗಲಿ: ಸಚಿವ ಶಿವರಾಮ್ ಹೆಬ್ಬಾರ್

author img

By

Published : Dec 10, 2022, 10:58 PM IST

let-there-be-a-discussion-about-bifurcation-of-the-district
ಜಿಲ್ಲೆ ಇಬ್ಬಾಗದ ಕುರಿತು ಚರ್ಚೆ ಆಗಲಿ: ಸಚಿವ ಶಿವರಾಮ್ ಹೆಬ್ಬಾರ್

ಉತ್ತರ ಕನ್ನಡ ಜಿಲ್ಲೆ ಇಬ್ಭಾಗ ಮಾಡುವ ಕುರಿತು ನಾನು ಯಾವತ್ತು ಪ್ರಸ್ತಾಪ ಮಾಡಿಲ್ಲ. ಆದರೆ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಆದರೆ ಎಲ್ಲರ ಅಭಿಪ್ರಾಯದೊಂದಿಗೆ ಆಗಬೇಕು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿದ್ದಾರೆ.

ಕಾರವಾರ(ಉತ್ತರ ಕನ್ನಡ): ಅಂಕೋಲಾದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಶಿವರಾಮ್​ ಹೆಬ್ಬಾರ್, ಜಿಲ್ಲೆ ಇಬ್ಭಾಗ ಮಾಡುವ ಕುರಿತು ನಾನು ಯಾವತ್ತು ಪ್ರಸ್ತಾಪ ಮಾಡಿಲ್ಲ. ಅಲ್ಲದೆ ಈ ಬಗ್ಗೆ ಮಾತನಾಡುವುದಕ್ಕೆ ನಾನು ಉಸ್ತುವಾರಿ ಸಚಿವನೂ ಅಲ್ಲ ಎಂದು ಉತ್ತರಿಸಿದ್ದಾರೆ.

ಜಿಲ್ಲೆಯ ಶಾಸಕನಾಗಿ ನಾನು ಮಾತನಾಡುವುದು ಅವಶ್ಯಕತೆ ಇದೆ. ಜಿಲ್ಲೆ ಇಬ್ಭಾಗದ ಕುರಿತು ಬುದ್ಧಿ ಜೀವಿಗಳ ಜೊತೆಗೆ, ನಮ್ಮೆಲ್ಲ ಶಾಸಕರ ಜೊತೆ ಚರ್ಚೆ ಮಾಡುತ್ತೇನೆ.‌ ಪ್ರಜಾಪ್ರಭುತ್ವದಲ್ಲಿ ಎಲ್ಲರ ಅಭಿಮತ ಮುಖ್ಯವಾಗಿರುವುದರಿಂದ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು ಎಂದು ಹೇಳಿದರು.

ಬಿಜೆಪಿಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ಕೊಡುವ ಬಗ್ಗೆ ಪ್ರಶ್ನಿಸಿದಾಗ ಈ ವಿಷಯದ ಬಗ್ಗೆ ಹೈಕಮಾಂಡ್​ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಭಯೋತ್ಪಾದಕರ 15 ಸ್ಲೀಪರ್ ಸೆಲ್​ಗಳ ಮೇಲೆ ಕ್ರಮ: ಸಿಎಂ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.