ETV Bharat / state

ಕೋವಿಡ್​ ತಗ್ಗಿದರೂ ಹಳ್ಳಿಗಳಿಗೆ ಬಾರದ ಬಸ್, ಉತ್ತರಕನ್ನಡದ ಹಳ್ಳಿಗಳಲ್ಲಿ ವಿದ್ಯಾರ್ಥಿಗಳ ಪರದಾಟ

author img

By

Published : Oct 26, 2021, 10:49 AM IST

Updated : Oct 26, 2021, 11:11 AM IST

no proper bus facilities in karawara
ಕಾರವಾರ ಬಸ್​ ಸಮಸ್ಯೆ

ಕಾರವಾರದ ಕೇರವಡಿ, ಕಿನ್ನರ, ಸಿದ್ದರ, ಅರ್ಗಾ, ಅಮದಳ್ಳಿ, ದೇವಳಮಕ್ಕಿ, ಭೈರೆ, ಕದ್ರಾ, ಮಲ್ಲಾಪುರ ಸೇರಿದಂತೆ ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಕೊರೊನಾ ಕಾರಣದಿಂದಾಗಿ ಸ್ಥಗಿತಗೊಳಿಸಿದ್ದ ಸಾರಿಗೆ ವ್ಯವಸ್ಥೆಯನ್ನು ಮತ್ತೆ ಸಮರ್ಪಕವಾಗಿ ಪ್ರಾರಂಭಿಸದೇ ಇರುವುದರಿಂದ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗಿದೆ.

ಕಾರವಾರ: ಕೋವಿಡ್​ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿ ಆರಂಭಗೊಂಡಿದೆ. ವಿದ್ಯಾರ್ಥಿಗಳು ಕೂಡ ಉತ್ಸಾಹದಿಂದಲೇ ಶಾಲೆಗಳತ್ತ ಮರಳಿದ್ದಾರೆ. ಆದರೆ ಕೋವಿಡ್ ಕಾರಣದಿಂದಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಲಾಕ್​ಡೌನ್​​ ವೇಳೆ ಸ್ಥಗಿತಗೊಳಿಸಿದ್ದ ಬಸ್ ಸೇವೆಗಳನ್ನು ಕೆಲ ಹಳ್ಳಿಗಳಲ್ಲಿ ಈವರೆಗೂ ಪ್ರಾರಂಭ ಮಾಡಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಕಾರವಾರ ಬಸ್​ ಸಮಸ್ಯೆ

ಕೋವಿಡ್​ ಹಿನ್ನೆಲೆಯಲ್ಲಿ ಎರಡು ಬಾರಿ ಲಾಕ್​ಡೌನ್​​ ಮಾಡಲಾಯ್ತು. ಇದೀಗ ಕೊರೊನಾ ಪ್ರಕರಣಗಳು ಕಡಿಮೆಯಾಗಿದ್ದು, ಎಲ್ಲ ವ್ಯವಸ್ಥೆ ಸಹಜ ಸ್ಥಿತಿಯತ್ತ ಮರಳುತ್ತಿದೆ. ಜೊತೆಗೆ ಶಾಲಾ-ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಕೂಡ ಉತ್ಸಾಹದಿಂದಲೇ ಶಾಲೆಗಳತ್ತ ಹೆಜ್ಜೆ ಹಾಕಿದ್ದಾರೆ. ಆದರೆ, ಕಾರವಾರದ ಕೇರವಡಿ, ಕಿನ್ನರ, ಸಿದ್ದರ, ಅರ್ಗಾ, ಅಮದಳ್ಳಿ, ದೇವಳಮಕ್ಕಿ, ಭೈರೆ, ಕದ್ರಾ, ಮಲ್ಲಾಪುರ ಸೇರಿದಂತೆ ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಕೊರೊನಾ ಕಾರಣದಿಂದಾಗಿ ಸ್ಥಗಿತಗೊಳಿಸಿದ್ದ ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಪ್ರಾರಂಭಿಸದೇ ಇರುವುದು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗಿದೆ.

ಕೊರೊನಾ ನಿಯಮಗಳು?

ಕೆಲವೆಡೆ ಕೆಲ ಬಸ್​ಗಳನ್ನು ಮಾತ್ರ ಆರಂಭಿಸಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಬಸ್​ಗಳಲ್ಲಿ ನಿಲ್ಲುವುದಕ್ಕೂ ಜಾಗವಿಲ್ಲದೇ ಕೊರೊನಾ ನಿಯಮಗಳನ್ನು ಬದಿಗೊತ್ತಿ ಮನೆಗೆ ತಲುಪಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಬಸ್ ಸೇವೆ ಒದಗಿಸಿಕೊಡುವಂತೆ ಒತ್ತಾಯ:

ಸದ್ಯ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಶೆ.1 ಕ್ಕಿಂತ ಕಡಿಮೆಯಾಗಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಹೆಚ್ಚಿನ ಆಸಕ್ತಿ ತೋರಿದ್ದಾರೆ. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಮುಂದಾದರೂ ಕೂಡ ಬಸ್ ಸಮಸ್ಯೆಯಾಗುತ್ತಿದ್ದು, ಕೂಡಲೇ ಜನ ಇರಲಿ ಅಥವಾ ಇಲ್ಲದೇ ಇರಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನಿತ್ಯ ಬಸ್ ಸೇವೆ ಒದಗಿಸಿಕೊಡಬೇಕು ಎನ್ನುವುದು ಸ್ಥಳೀಯರ ಒತ್ತಾಯ.

ಇದನ್ನೂ ಓದಿ: ಆನ್‌ಲೈನ್‌ ಆಗ್ತಿದೆ ಧಾರವಾಡ ಹೈಕೋರ್ಟ್‌ ಕಾರ್ಯಕಲಾಪ; ವಕೀಲರು, ಕಕ್ಷಿದಾರರಿಗೂ ಅನುಕೂಲ

ಈ ಬಗ್ಗೆ ಅಧಿಕಾರಿಗಳನ್ನು ಕೇಳಿದ್ರೆ ಬಸ್ ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿರುವುದು ಮತ್ತು ಕೆಲ ಭಾಗಗಳಲ್ಲಿ ಸ್ಥಗಿತಗೊಳಿಸಿರುವ ಬಸ್ ಪ್ರಾರಂಭಕ್ಕೆ ಮನವಿ ಸಲ್ಲಿಸಲಾಗಿದೆ. ಅದರಂತೆ ಕಳೆದ ಎರಡು ದಿನದ ಹಿಂದೆ ಕಾರವಾರದ ನಗೆಕೋವೆಗೆ ಬಸ್ ಸೌಕರ್ಯ ಕಲ್ಪಿಸಲಾಗಿಸೆ. ಉಳಿದಂತೆ ಎಲ್ಲಿ ಅವಶ್ಯಕವಿದೆಯೋ ಅಲ್ಲಿ ಬಸ್ ವ್ಯವಸ್ಥೆಯನ್ನು ಸೂಕ್ತ ರೀತಿಯಲ್ಲಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Last Updated :Oct 26, 2021, 11:11 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.