ETV Bharat / state

ಕಾರವಾರ: ಸಮುದ್ರ ಪಾಲಾಗುತ್ತಿದ್ದ ಒಂದೇ ಕುಟುಂಬದ ಮೂವರ ರಕ್ಷಣೆ

author img

By

Published : Feb 28, 2021, 11:08 AM IST

ಸಮುದ್ರದ ಪಾಲಾಗುತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಸಂಜನ, ಸಂಜಯ್ ಹಾಗೂ ಕಮಲಮ್ಮ ರಕ್ಷಣೆಗೊಳಗಾದವರು.

karwar
ಒಂದೇ ಕುಟುಂಬದ ಮೂವರು ಪ್ರವಾಸಿಗರ ರಕ್ಷಣೆ

ಕಾರವಾರ: ಸಮುದ್ರದ ಪಾಲಾಗುತ್ತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಣೆ ಮಾಡಿರುವ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ.

ಸಂಜನ, ಸಂಜಯ್ ಹಾಗೂ ಕಮಲಮ್ಮ ರಕ್ಷಣೆಗೊಳಗಾದವರು. ಬೆಂಗಳೂರಿನ ಕತ್ರಿಗುಪ್ಪೆಯಿಂದ ಮುರುಡೇಶ್ವರಕ್ಕೆ ಆಗಮಿಸಿದ್ದ ಒಂದೇ ಕುಟುಂಬದ ಐವರು ನೀರಿಗಿಳಿದಿದ್ದರು. ಸಮುದ್ರದಲ್ಲಿ ಈಜಾಡುವಾಗ ಅಲೆಗೆ ಸಿಲುಕಿ ಸಂಜನ, ಸಂಜಯ್ ಹಾಗೂ ಕಮಲಮ್ಮ ಎಂಬುವರು ಕೊಚ್ಚಿ ಹೋಗಿದ್ದರು. ತಕ್ಷಣ ಅಲ್ಲಿಯೇ ಇದ್ದವರು ಕೂಗಿಕೊಂಡಾಗ ಸ್ಥಳೀಯರಾದ ಸಂಜೀವ್ ಹರಿಕಾಂತ್ ಹಾಗೂ ಚಂದ್ರಶೇಖರ್ ದೇವಾಡಿಗ ಎಂಬುವರು ಮೂವರನ್ನು ರಕ್ಷಣೆ ಮಾಡಿದ್ದಾರೆ.

ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.