ETV Bharat / state

ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ.. ಉತ್ತರಕನ್ನಡದ ವಿವಿಧೆಡೆ ನೌಕರರ ಪ್ರತಿಭಟನೆ

author img

By

Published : Oct 5, 2020, 5:23 PM IST

ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಹಾಗೂ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೂ ಸಹಾಯಧನ ಹಂತ ಹಂತವಾಗಿ ಕಡಿಮೆಯಾಗಲಿದ್ದು, ರೈತರು ಬೆಳೆಯುವ ಆಹಾರ ಉತ್ಪಾದನೆಗೂ ಸಮಸ್ಯೆಯಾಗಲಿದೆ. ತಕ್ಷಣ ಖಾಸಗೀಕರಣ ಮಸೂದೆಯನ್ನು ಕೈಬಿಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು..

protest against electricity privatization
ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ

ಕಾರವಾರ/ಉತ್ತರಕನ್ನಡ : 2003ರ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ವಿತರಣೆ ಮತ್ತು ಪ್ರಸರಣ ನಿಗಮದ ಸಮಿತಿ ನೌಕರರು ಸೋಮವಾರ ಕಾರವಾರದ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ

ಸರ್ಕಾರ ವಿದ್ಯುತ್ ಸರಬರಾಜನ್ನು ಖಾಸಗೀಕರಣ ಮಾಡಲು ಹೊರಟಿರುವುದರಿಂದ ನೌಕರರು ಹಾಗೂ ಗ್ರಾಹಕರಿಗೆ ತೀವ್ರ ತೊಂದರೆ ಉಂಟಾಗಲಿದೆ. ಅಲ್ಲದೆ ರೈತರು ಹಾಗೂ ಗ್ರಾಹಕರು ಸರ್ಕಾರದಿಂದ ದೊರೆಯುವ ಹಲವು ಸೌಲಭ್ಯಗಳಿಂದ ವಂಚಿತರಾಗಲಿದ್ದು, ಕೂಡಲೇ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಹಾಗೂ ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೂ ಸಹಾಯಧನ ಹಂತ ಹಂತವಾಗಿ ಕಡಿಮೆಯಾಗಲಿದ್ದು, ರೈತರು ಬೆಳೆಯುವ ಆಹಾರ ಉತ್ಪಾದನೆಗೂ ಸಮಸ್ಯೆಯಾಗಲಿದೆ. ತಕ್ಷಣ ಖಾಸಗೀಕರಣ ಮಸೂದೆಯನ್ನು ಕೈಬಿಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಒಕ್ಕೂಟದ ಕೇಂದ್ರ ಸಮಿತಿ ಸದಸ್ಯ ಗಿರಿಧರ್ ಹರಿಕಂತ್ರ, ಸ್ಥಳೀಯ ಸಮಿತಿ ಅಧ್ಯಕ್ಷ ಎಂ ರಾಮಪ್ಪ, ಎಂಜಿನಿಯರಿಂಗ್ ಅಸೋಸಿಯೇಷನ್‌ನ ವಿ ಎಸ್ ಶೇಬಣ್ಣ, ಕಾರ್ಯನಿರ್ವಾಹಕ ಎಂಜಿನಿಯರ್​​​ ರೋಶ್ನಿ ಪಡ್ನೇಕರ್ ಮುಂತಾದವರಿದ್ದರು.

ಅಂಕೋಲಾದಲ್ಲಿಯೂ ಪ್ರತಿಭಟನೆ : ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಂಕೋಲಾದಲ್ಲಿಯೂ ಕವಿಪ್ರನಿ ನೌಕರರ ಸಂಘ‌ ಹಾಗೂ ಸಂಸ್ಥೆಗಳ ಒಕ್ಕೂಟದಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು. ಕಾರ್ಯನಿರ್ವಾಹಕ ಅಭಿಯಂತರ ಪ್ರವೀಣ್ ನಾಯ್ಕ, ಕವಿಪ್ರ ನೌಕರರ ಸಂಘ ಅಧ್ಯಕ್ಷರ ರಾಜು ನಾಯ್ಕ,ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮತ್ತು ಪದಾಧಿಕಾರಿಗಳು ನಿವೃತ್ತ ಸಿಬ್ಬಂದಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.