ETV Bharat / state

ಕಾರವಾರದಲ್ಲಿ ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಮಕ್ಕಳಿಗೆ ಗಾಯ

author img

By

Published : Dec 22, 2022, 3:09 PM IST

Updated : Dec 22, 2022, 3:45 PM IST

ಕಾರವಾರದ ಮಲ್ಲಾಪುರದ ಬಳಿ ಕಾರು, ಬಸ್ ಮತ್ತು​ ಬೈಕ್​ ನಡುವೆ ಸರಣಿ ಅಪಘಾತವಾಗಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

series-of-accident-in-karwar-one-dead-two-children-injured
ಕಾರವಾರದಲ್ಲಿ ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಮಕ್ಕಳಿಗೆ ಗಾಯ

ಕಾರವಾರ(ಉತ್ತರ ಕನ್ನಡ): ಕಾರು, ಬಸ್‌ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ‌ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿದೆ.

ಬಾಳ್ನಿಯ ಸತ್ಯಂ ಗೋವಿಂದ ನಾಯ್ಕ(19) ಮೃತಪಟ್ಟ ಯುವಕ. ಈತ ಮಕ್ಕಳನ್ನು ಶಾಲೆಗೆ ಬಿಡಲು ಬಂದಿದ್ದ ಎನ್ನಲಾಗ್ತಿದೆ. ಈ ವೇಳೆ ಬೈಕ್, ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಬಸ್ ಅಡಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಇನ್ನು, ಈತನ ಜೊತೆ ಇದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಕೂಡ ಬಸ್​ಗೆ ಗುದ್ದಿದ ಕಾರಣ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕದ್ರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಶಂಭುಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿಗೆ ಹಿಂದೂ ಸಂಘಟನೆಗಳ ಆಗ್ರಹ

Last Updated : Dec 22, 2022, 3:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.